June 7, 2026
Sunday, June 7, 2026
spot_img

ಗ್ಯಾಸ್ ಸಿಲಿಂಡರ್ ದರ ಏರಿಕೆ: ಕೇಂದ್ರ ಸರಕಾರದ ವಿರುದ್ಧ ಡಿಸಿಎಂ ಡಾ.ಜಿ.ಪರಮೇಶ್ವರ್ ಆಕ್ರೋಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರ ಇಂಧನ ದರವನ್ನು ಪದೇ ಪದೇ ಹೆಚ್ಚಿಸುವ ಬದಲು, ಜನರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡಲು ಹೆಚ್ಚು ಗಮನಹರಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಮಾತನಾಡಿದ ಅವರು, ಸಿಲಿಂಡರ್ ದರವನ್ನು ಎರಡು ಬಾರಿ ಹೆಚ್ಚಿಸಲಾಗಿದ್ದು, ಇದೀಗ ಮತ್ತೊಮ್ಮೆ 29 ರೂಪಾಯಿ ಏರಿಕೆ ಮಾಡಿದ್ದಾರೆ. ಈ ರೀತಿ ಬೆಲೆ ಏರಿಕೆ ಮಾಡುತ್ತಿರುವುದು ಸಮರ್ಥನೀಯವಲ್ಲ ಎಂದು ಆಕ್ರೋಶ ಹೊರಹಾಕಿದರು.

ಕೇಂದ್ರ ಸರ್ಕಾರದ ಜವಾಬ್ದಾರಿ

ಕೇಂದ್ರ ಸರಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ಪೂರೈಕೆ ಕುಂಠಿತವಾಗಿದೆ ಎಂಬ ಕಾರಣ ನೀಡುತ್ತದೆ. ಆದರೆ ಆ ಹೊರೆಯನ್ನು ಜನರ ಮೇಲೆ ಹೇರಬಾರದು. ಜಾಗತಿಕ ಮಾರುಕಟ್ಟೆಯ ಏರಿಳಿತವನ್ನು ಗಮನಹರಿಸಿ ಬೆಲೆ ನಿಗದಿಪಡಿಸಬೇಕು. ಈ ಮೂಲಕ ಸಾಮಾನ್ಯ ಜನರ ಹಿತಾಸಕ್ತಿ ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಅವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !