ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಪುನರಾರಂಭವಾಗಲಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅತ್ಯಂತ ಖಡಕ್ ಉತ್ತರ ನೀಡಿದ್ದಾರೆ.
ಇಂದು ನಡೆಯಲಿರುವ ಮಹತ್ವದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಹಸ್ತಲಾಘವದ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದರು. ಪಾಕಿಸ್ತಾನದ ನಾಯಕಿ ಫಾತಿಮಾ ಸನಾ ಹಾಗೂ ಅವರ ತಂಡದೊಂದಿಗೆ ಭಾರತೀಯ ಆಟಗಾರ್ತಿಯರು ಪಂದ್ಯದ ಆರಂಭಕ್ಕೂ ಮುನ್ನ ಅಥವಾ ನಂತರ ಹಸ್ತಲಾಘವ ಮಾಡಿಕೊಳ್ಳುತ್ತಾರೆಯೇ ಎಂಬ ನೇರ ಪ್ರಶ್ನೆಗೆ ಹರ್ಮನ್ಪ್ರೀತ್ ಕೌರ್ ನೀಡಿದ ಪ್ರತಿಕ್ರಿಯೆ ಸದ್ಯ ಕ್ರೀಡಾ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಹರ್ಮನ್ಪ್ರೀತ್ ಕೌರ್ ನೀಡಿದ ಖಡಕ್ ಉತ್ತರ ಏನು?
ಪಾಕಿಸ್ತಾನದ ವಿರುದ್ಧ ಸರಣಿ ಆಡುವ ಅಥವಾ ಬಿಡುವ ನಿರ್ಧಾರ ಸಂಪೂರ್ಣವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತು ಭಾರತ ಸರ್ಕಾರದ ಕೈಯಲ್ಲಿದೆ ಎಂದು ಹರ್ಮನ್ಪ್ರೀತ್ ಕೌರ್ ಸ್ಪಷ್ಟಪಡಿಸಿದರು. ಒಬ್ಬ ಆಟಗಾರ್ತಿಯಾಗಿ ಅಥವಾ ತಂಡದ ನಾಯಕಿಯಾಗಿ ನನ್ನ ಕೆಲಸ ಮೈದಾನಕ್ಕಿಳಿದು ದೇಶಕ್ಕಾಗಿ ಕ್ರಿಕೆಟ್ ಆಡುವುದು ಮಾತ್ರ. ಎದುರಾಳಿ ಯಾರೇ ಆಗಿದ್ದರೂ ನಾವು ನಮ್ಮ ಅತ್ಯುತ್ತಮ ಪ್ರದರ್ಶನ ನೀಡಲು ಗಮನ ಹರಿಸುತ್ತೇವೆ. ಇಂತಹ ರಾಜತಾಂತ್ರಿಕ ನಿರ್ಧಾರಗಳನ್ನು ತೆಗೆದುಕೊಳ್ಳುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಅವರು ನೇರವಾಗಿ ಆಗಿ ಉತ್ತರಿಸಿದ್ದಾರೆ.
ಇದನ್ನೂ ಓದಿ:
ಹಿನ್ನೆಲೆ: ಭಾರತ-ಪಾಕ್ ಕ್ರಿಕೆಟ್ ವೈಷಮ್ಯ
ಕಳೆದ ಹಲವು ವರ್ಷಗಳಿಂದ ಗಡಿ ಗಲಾಟೆ ಮತ್ತು ರಾಜಕೀಯ ಉದ್ವಿಗ್ನತೆಯ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಯಾವುದೇ ದ್ವಿಪಕ್ಷೀಯ ಸರಣಿಗಳಲ್ಲಿ ಮುಖಾಮುಖಿಯಾಗುತ್ತಿಲ್ಲ. ಕೇವಲ ಐಸಿಸಿ ಮತ್ತು ಏಷ್ಯಾ ಕಪ್ನಂತಹ ಬಹುರಾಷ್ಟ್ರೀಯ ಟೂರ್ನಿಗಳಲ್ಲಿ ಮಾತ್ರ ಉಭಯ ತಂಡಗಳು ಪರಸ್ಪರ ಸೆಣಸಾಡುತ್ತಿವೆ. ಇತ್ತೀಚೆಗೆ ಪುರುಷರ ಮತ್ತು ಮಹಿಳಾ ಕ್ರಿಕೆಟ್ನಲ್ಲಿ ಭಾರತ ತಂಡವು ಪಾಕಿಸ್ತಾನ ಪ್ರವಾಸ ಮಾಡಲು ನಿರಾಕರಿಸುತ್ತಿರುವ ಬೆನ್ನಲ್ಲೇ ಈ ಪ್ರಶ್ನೆ ಕೇಳಲಾಗಿತ್ತು.



