June 21, 2026
Sunday, June 21, 2026
spot_img

ಸಮನ್ಸ್‌ಗೂ ಸ್ಪಂದನೆ ಇಲ್ಲ: ಬಂಧನದ ಭೀತಿಯಲ್ಲಿ ನಟ ಪ್ರಕಾಶ್ ರಾಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದು, ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಪ್ರಕರಣದಲ್ಲಿ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ.

ವೋಟರ್ ಐಡಿ ಆರೋಪ ಏನು?

ಒಂದೇ ವ್ಯಕ್ತಿಯ ಹೆಸರಿನಲ್ಲಿ ಹಲವು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಪಡೆದಿದ್ದಾರೆ ಎಂಬ ಆರೋಪದಡಿ ದಿಲೀಪ್ ಕುಮಾರ್ ಎಂಬುವರು ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ಬೆಂಗಳೂರು ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಮರುಮರು ಸಮನ್ಸ್‌ಗೂ ಹಾಜರಾಗದ ನಟ

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈಗಾಗಲೇ ಎರಡು ಬಾರಿ ಸಮನ್ಸ್ ಹಾಗೂ ಎರಡು ಬಾರಿ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು. ಆದರೂ ಪ್ರಕಾಶ್ ರಾಜ್ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮೂರನೇ ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಇದನ್ನೂ ಓದಿ:

ನಾಲ್ಕು ರಾಜ್ಯಗಳ ಹೆಸರು ಪ್ರಸ್ತಾಪ

ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂಬ ಆರೋಪ ಪ್ರಕರಣದ ಕೇಂದ್ರಬಿಂದುವಾಗಿದೆ. ಸಂವಿಧಾನದ ಪ್ರಕಾರ ಒಬ್ಬ ವ್ಯಕ್ತಿಗೆ ಒಂದೇ ಮತದಾರರ ಗುರುತಿನ ಚೀಟಿ ಮಾತ್ರ ಮಾನ್ಯವಾಗಿದೆ.

ಬಂಧನ ಭೀತಿ ಹೆಚ್ಚಳ

ನ್ಯಾಯಾಲಯದ ಆದೇಶಗಳಿಗೂ ಸ್ಪಂದನೆ ನೀಡದಿರುವುದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದ್ದು, ಕಾನೂನು ಉಲ್ಲಂಘನೆಯ ಆರೋಪವೂ ಸೇರಿಕೊಂಡಿದೆ. ಇದರ ಪರಿಣಾಮವಾಗಿ ನಟ ಪ್ರಕಾಶ್ ರಾಜ್‌ಗೆ ಬಂಧನ ಭೀತಿ ಎದುರಾಗಿರುವುದು ಚರ್ಚೆಗೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !