August 13, 2026
Thursday, August 13, 2026
spot_img

ಬೆಂಗಳೂರಿಗೆ ಸಿಕ್ತು ಬಿಗ್ ಗಿಫ್ಟ್: ನಗರದ ಮೊದಲ ಟನಲ್ ರಸ್ತೆ ಕಾಮಗಾರಿಗೆ ಸಿಎಂ ಡಿಕೆಶಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಇತಿಹಾಸದಲ್ಲೇ ಮೈಲಿಗಲ್ಲಾಗಲಿರುವ ಮೊದಲ ಟನಲ್ ರಸ್ತೆ ಕಾಮಗಾರಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಇಂದು ಅಧಿಕೃತವಾಗಿ ಗುದ್ದಲಿ ಪೂಜೆ ನೆರವೇರಿಸಿದರು. ಸಾಂಪ್ರದಾಯಿಕವಾಗಿ ಭೂಮಿ ಅಗೆಯುವ ಮೂಲಕ ಅವರು ಈ ಬೃಹತ್ ಯೋಜನೆಗೆ ಹಸಿರು ನಿಶಾನೆ ತೋರಿದರು.

ಗಣ್ಯರ ಉಪಸ್ಥಿತಿ ಮತ್ತು ಯೋಜನೆ ಪರಿಶೀಲನೆ

ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಸಾರಿಗೆ ಸಚಿವ ಬೈರತಿ ಸುರೇಶ್, ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು. ಗುದ್ದಲಿ ಪೂಜೆಯ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಯೋಜನೆಯ ಸಂಪೂರ್ಣ ರೂಪುರೇಷೆಗಳನ್ನು ವೀಕ್ಷಿಸಿದರು. ಅಲ್ಲದೆ, ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿ, ಸುರಂಗ ಮಾರ್ಗದ ನಕ್ಷೆ ಹಾಗೂ ತಾಂತ್ರಿಕ ಮಾಹಿತಿಗಳನ್ನು ಪಡೆದುಕೊಂಡರು.

ಈ ಹೈಟೆಕ್ ಟನಲ್ ರಸ್ತೆಯು ಭವಿಷ್ಯದಲ್ಲಿ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಲಿದ್ದು, ನಗರದ ಮೂಲಸೌಕರ್ಯಕ್ಕೆ ಹೊಸ ವೇಗ ನೀಡಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !