April 29, 2026
Wednesday, April 29, 2026
spot_img

ಟ್ರಾಫಿಕ್ ಫೈನ್ ಡಿಸ್ಕೌಂಟ್ ಆಫರ್ ಬಳಸಿ ದಂಡ ಕಟ್ಟಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಂಚಾರ ನಿಯಮಗಳ ಉಲ್ಲಂಘನೆಯ ದಂಡ ಪಾವತಿಗೆ ನೀಡಲಾಗಿರುವ ಶೇ 50ರ ರಿಯಾಯಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ , ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಮುಂತಾದ ರಾಜಕೀಯ ವ್ಯಕ್ತಿಗಳೂ ಸಹ ಬಳಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘನೆಗೆ ಶೇ 50 ರ ರಿಯಾಯಿತಿ ಅಡಿ ದಂಡ ಪಾವತಿಸಿದ್ದಾರೆ.

2024 ರ ಜನವರಿ ಮತ್ತು ಆಗಸ್ಟ್ ನಡುವೆ ಮುಖ್ಯಮಂತ್ರಿಗಳ ಅಧಿಕೃತ ಟೊಯೋಟಾ ಫಾರ್ಚೂನರ್ ಕಾರು ಆರು ಸೀಟ್‌ಬೆಲ್ಟ್ ಉಲ್ಲಂಘನೆ ಮತ್ತು ಒಂದು ವೇಗದ ಚಾಲನೆ ಪ್ರಕರಣದಲ್ಲಿ ಸಿಲುಕಿತ್ತು. ಇವೆಲ್ಲವೂ ಬಂಗಳೂರಿನ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅಡಿಯಲ್ಲಿ ಕಣ್ಗಾವಲು ಕ್ಯಾಮರಾಗಳಲ್ಲಿ ಸೆರೆಯಾಗಿದ್ದವು. ಸೀಟ್‌ಬೆಲ್ಟ್ ಉಲ್ಲಂಘನೆಯ ಸಮಯದಲ್ಲಿ ಸಿದ್ದರಾಮಯ್ಯ ಅವರೇ ಪ್ರಯಾಣಿಕರ ಸೀಟಿನಲ್ಲಿ ಕುಳಿತಿದ್ದರು ಎಂದು ವರದಿಯಾಗಿದೆ.

ಸರ್ಕಾರ ಶೇಕಡಾ 50 ರಷ್ಟು ಸಂಚಾರ ದಂಡ ವಿನಾಯಿತಿಯನ್ನು ಪಡೆದುಕೊಂಡು ಮುಖ್ಯಮಂತ್ರಿ ಕಚೇರಿ 2,500 ರೂ. ದಂಡ ಪಾವತಿಸಿ, ಬಾಕಿ ಹಣವನ್ನು ಇತ್ಯರ್ಥಪಡಿಸಿದೆ. ಗಣ್ಯರಿಗೂ ಯಾವುದೇ ವಿನಾಯಿತಿ ನೀಡದೆ ದಂಡ ಕಟ್ಟಿಸಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯೇಂದ್ರ ಕೂಡ ಅವರ ವಾಹನಕ್ಕೆ ಸಂಬಂಧಿಸಿದ 10 ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆಗಳಿಗೆ ದಂಡ ಪಾವತಿಸಿದ್ದಾರೆ. ಇದರಲ್ಲಿ ವೇಗದ ಚಾಲನೆ, ಸಿಗ್ನಲ್ ಉಲ್ಲಂಘನೆ ಮತ್ತು ಸೀಟ್‌ಬೆಲ್ಟ್ ಸಂಬಂಧಿತ ಅಪರಾಧಗಳು ಸೇರಿವೆ. ಅವರ ಕಚೇರಿಯು ಒಟ್ಟು 3,250 ರೂ. ಪಾವತಿಸಿದೆ. ಇದರಲ್ಲಿ, ಕೆಲವು ದಂಡಗಳು 2020 ಕ್ಕಿಂತಲೂ ಹಿಂದಿನವುಗಳಾಗಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !