July 3, 2026
Friday, July 3, 2026
spot_img

ಜಾತಿ ಪ್ರಮಾಣಪತ್ರ ಕಡ್ಡಾಯವೇ? ಗೃಹ ಜ್ಯೋತಿ ಕುರಿತು ಬೆಸ್ಕಾಂ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಜಾತಿ ಮಾಹಿತಿಗೆ ಸಂಬಂಧಿಸಿದ ಗೊಂದಲಗಳಿಗೆ ಬೆಸ್ಕಾಂ ಸ್ಪಷ್ಟನೆ ನೀಡಿದೆ.

ಫಲಾನುಭವಿಗಳಿಂದ ಜಾತಿ ಅಥವಾ ಪ್ರವರ್ಗದ ಮಾಹಿತಿ ಪಡೆಯುವುದು ಕಡ್ಡಾಯವಲ್ಲ, ಅದು ಸಂಪೂರ್ಣವಾಗಿ ಐಚ್ಛಿಕ ಎಂದು ಸಂಸ್ಥೆ ತಿಳಿಸಿದೆ.

ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ

ಜುಲೈ 1ರಿಂದ ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಶನ್ ಮತ್ತು ಮುದ್ರಿತ ಘೋಷಣಾ ಪತ್ರದ ಮೂಲಕ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಈ ಪ್ರಕ್ರಿಯೆಯ ಉದ್ದೇಶ ಯೋಜನೆಯ ಮಾಹಿತಿಯನ್ನು ನವೀಕರಿಸುವುದಾಗಿದೆ.

ಇದನ್ನೂ ಓದಿ:

ಜಾತಿ ವಿವರ ನೀಡುವುದು ಫಲಾನುಭವಿಗಳ ಆಯ್ಕೆ

ಮಾಹಿತಿ ಸಂಗ್ರಹದ ವೇಳೆ ಫಲಾನುಭವಿಗಳ ಪ್ರವರ್ಗ ಅಥವಾ ಜಾತಿ ಪ್ರಮಾಣಪತ್ರದ ವಿವರವನ್ನು ಕೇಳಲಾಗುತ್ತಿದೆಯಾದರೂ, ಅದನ್ನು ನೀಡುವುದು ಕಡ್ಡಾಯವಲ್ಲ ಎಂದು ಬೆಸ್ಕಾಂ ತಿಳಿಸಿದೆ. ಜಾತಿ ಮಾಹಿತಿ ಹಂಚಿಕೊಳ್ಳಲು ಇಚ್ಛಿಸದವರು ಅದನ್ನು ನಿರಾಕರಿಸುವ ಅವಕಾಶವನ್ನೂ ಹೊಂದಿದ್ದಾರೆ.

ಸಿಬ್ಬಂದಿಗೆ ಈಗಾಗಲೇ ಸೂಚನೆ

ಜಾತಿ ಮಾಹಿತಿ ನೀಡಲು ಫಲಾನುಭವಿಗಳು ಒಪ್ಪದಿದ್ದರೆ, ಸೇವಾ ಸಿಂಧು ಮೊಬೈಲ್ ಅಪ್ಲಿಕೇಶನ್‌ನಲ್ಲಿ ‘ಮಾಹಿತಿ ನೀಡಲು ನಿರಾಕರಣೆ’ ಎಂಬ ಆಯ್ಕೆಯನ್ನು ದಾಖಲಿಸುವಂತೆ ಸಿಬ್ಬಂದಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಈ ಕುರಿತು ಮೂಡಿದ್ದ ಗೊಂದಲದ ಹಿನ್ನೆಲೆಯಲ್ಲಿ ಬೆಸ್ಕಾಂ ಈ ಸ್ಪಷ್ಟನೆ ನೀಡಿದ್ದು, ಫಲಾನುಭವಿಗಳು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !