ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರವು ಸಂಸತ್ತಿನ ಮುಂಗಾರು ಅಧಿವೇಶನದ ದಿನಾಂಕವನ್ನು ಪ್ರಕಟಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರ ಮಾಹಿತಿ ಪ್ರಕಾರ, ಜುಲೈ 20ರಿಂದ ಆಗಸ್ಟ್ 13ರವರೆಗೆ ಲೋಕಸಭೆ ಹಾಗೂ ರಾಜ್ಯಸಭೆಯ ಅಧಿವೇಶನ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಧಿವೇಶನದಲ್ಲಿ ದೇಶದ ಮಹತ್ವದ ವಿಷಯಗಳ ಕುರಿತು ಚರ್ಚೆ, ನಿರ್ಧಾರಗಳು ಹಾಗೂ ಹಲವು ಪ್ರಮುಖ ಮಸೂದೆಗಳ ಮಂಡನೆ ನಡೆಯುವ ಸಾಧ್ಯತೆಯಿದೆ.
ಇದನ್ನೂ ಓದಿ:
ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ
ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಎನ್ಡಿಎ ಬಲ ಹೆಚ್ಚಾಗಿದೆ. ತೃಣಮೂಲ ಕಾಂಗ್ರೆಸ್ ಹಾಗೂ ಶಿವಸೇನೆ (ಯುಬಿಟಿ)ಯಲ್ಲಿ ನಡೆದ ಬಣ ಬದಲಾವಣೆಗಳು ಈ ಅಧಿವೇಶನದಲ್ಲಿ ಪ್ರಮುಖ ಚರ್ಚೆಗೆ ಕಾರಣವಾಗುವ ನಿರೀಕ್ಷೆಯಿದೆ.
ಪ್ರತಿಪಕ್ಷದ ಸಿದ್ಧತೆ
ನೀಟ್ ಮರುಪರೀಕ್ಷೆ, ಇಂಧನ ದರ, ಆರ್ಥಿಕ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಕೆಲವು ಪ್ರಮುಖ ಮಸೂದೆಗಳನ್ನು ಸರ್ಕಾರ ಮತ್ತೆ ಮಂಡಿಸುವ ಸಾಧ್ಯತೆಯೂ ಇದೆ.



