ಹೊಸದಿಗಂತ ವರದಿ ಸೋಮವಾರಪೇಟೆ:
ತಾಲೂಕಿನ ಪ್ರವಾಸಿ ತಾಣ ಮಲ್ಲಳ್ಳಿ ಸುತ್ತಮುತ್ತಲಲ್ಲಿ ಮಳೆ ಬಿರುಸುಗೊಳ್ಳುತಿರುವ ಹಿನ್ನಲೆಯಲ್ಲಿ ಜಲಪಾತದಲ್ಲಿ ನೀರು ಹೆಚ್ಚಾಗುತ್ತಿದೆ ಅಲ್ಲದೆ ಮೇಲ್ಭಾಗದಲ್ಲಿರುವ ವಿದ್ಯುತ್ ಉತ್ಪಾದನಾ ಘಟಕದಿಂದ ಹೆಚ್ಚಿನ ನೀರು ಹೊರಬಿಡುವ ಅರಿವಿಲ್ಲದ ಇಬ್ಬರು ಯುವಕರು ಇಂದು ಮಧ್ಯಾಹ್ನ ಪೋಟೋ ತೆಗೆಯಲು ಜಲಪಾತದ ಮಧ್ಯದಲ್ಲಿರುವ ಬಂಡೆಯೇರಿ ಕುಳಿತಿದ್ದಾರೆ.
ಇದೇ ಸಂದರ್ಭ ನೀರಿನ ಹರಿವು ಹೆಚ್ಚಾಗಿ ಅಪಾಯಕ್ಕೆ ಸಿಲುಕಿದ್ದಾರೆ. ಇದನ್ನ ಗಮನಿಸಿದ ಇತರೆ ಪ್ರವಾಸಿಗರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಎರಡು ಜೀವಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿಗಳಿಬ್ಬರೂ ಮೂಲತಃ ಆಂಧ್ರಪ್ರದೇಶವರಾಗಿದ್ದು, ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರೆಂದು ಹೇಳಲಾಗಿದೆ.



