July 11, 2026
Saturday, July 11, 2026
spot_img

SIR ದಾಖಲೆ ಗೊಂದಲಕ್ಕೆ ಪರಿಹಾರ: ಖಾಯಂ ನಿವಾಸ ಪ್ರಮಾಣಪತ್ರ ನೀಡಲು ಸರ್ಕಾರದ ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಅಗತ್ಯ ದಾಖಲೆಗಳ ಭಾಗವಾಗಿ ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಕ್ರಮ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಆಧಾರ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಈ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಖಾಯಂ ನಿವಾಸ ಪ್ರಮಾಣಪತ್ರಕ್ಕೆ ಕ್ರಮ

SIR ಪ್ರಕ್ರಿಯೆಯಲ್ಲಿ ಹಲವು ದಾಖಲೆಗಳನ್ನು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲಾಗುವುದು. ಈ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮವಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ:

ಬಿಜೆಪಿ ಆರೋಪಕ್ಕೆ ತಿರುಗೇಟು

ಬಾಂಗ್ಲಾದೇಶದ ನಾಗರಿಕರಿಗೆ ಈ ಪ್ರಮಾಣಪತ್ರ ನೀಡಲಾಗುತ್ತಿದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದರು. ರಾಜ್ಯ ಸರ್ಕಾರಕ್ಕೆ ಯಾರಿಗೂ ಪೌರತ್ವ ನೀಡುವ ಅಧಿಕಾರ ಇಲ್ಲ. ಹೀಗಾಗಿ ಇಂತಹ ಆರೋಪಗಳಿಗೆ ಯಾವುದೇ ಆಧಾರವಿಲ್ಲ ಎಂದು ಹೇಳಿದರು.

ದಸರಾ ಅದ್ಧೂರಿಯಾಗಲಿ

ಮೈಸೂರು ದಸರಾವನ್ನು ಸರಳವಾಗಿ ಅಲ್ಲ, ಸಂಪ್ರದಾಯಕ್ಕೆ ತಕ್ಕಂತೆ ವಿಜೃಂಭಣೆಯಿಂದ ಆಚರಿಸಬೇಕು ಎಂದು ಸಭೆಯಲ್ಲಿ ಸಲಹೆ ನೀಡಿರುವುದಾಗಿ ತಿಳಿಸಿದರು. ದಸರಾ ವೇಳೆ ಕಂಬಳ ಆಯೋಜನೆ ಕುರಿತು ಸರ್ಕಾರ ಎಲ್ಲರ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !