ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಫಿಫಾ ವಿಶ್ವಕಪ್ 2026ರ ಫೈನಲ್ ಪಂದ್ಯಕ್ಕಾಗಿ ಎನ್ಜಿವಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ವೀಕ್ಷಣಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.
ಫುಟ್ಬಾಲ್ ಅಭಿಮಾನಿಗಳೊಂದಿಗೆ ಪಂದ್ಯವನ್ನು ವೀಕ್ಷಿಸಲು ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಕೂಡ ಸ್ಥಳದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಕ್ರೀಡೆಯು ತಂಡದ ಮನೋಭಾವವನ್ನು ಬೆಳೆಸಲು ಸಹಾಯ ಮಾಡುತ್ತದೆ. ತಾವು ‘ಟೀಂ ಕರ್ನಾಟಕ’ವನ್ನು (ಕರ್ನಾಟಕ ತಂಡ) ಕಟ್ಟುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದರು.
ಕ್ರೀಡೆಯತ್ತ ಆಕರ್ಷಿತರಾದಾಗ, ಸಹಜವಾಗಿಯೇ ಕ್ರೀಡಾ ಮನೋಭಾವ ಮೂಡುತ್ತದೆ. ನಾನು ಕೂಡ ಟೀಂ ಕರ್ನಾಟಕವನ್ನು ಕಟ್ಟುತ್ತಿದ್ದೇನೆ. ಇದರಲ್ಲಿ ನನ್ನ ಅಧಿಕಾರಿಗಳು, ಕಾರ್ಯಕರ್ತರು, ಸಚಿವರು ಮತ್ತು ನನ್ನ ಎಲ್ಲ ಸಹೋದ್ಯೋಗಿಗಳು ಸೇರಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.



