July 22, 2026
Wednesday, July 22, 2026
spot_img

ಸೋನಮ್ ವಾಂಗ್ಚುಕ್ ಸತ್ಯಾಗ್ರಹ ಕಾವು: ಹೈಕೋರ್ಟ್ ಮಧ್ಯಪ್ರವೇಶ, ಗುರುಗ್ರಾಮ ಆಸ್ಪತ್ರೆಗೆ ಸ್ಥಳಾಂತರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್‌ ಪರೀಕ್ಷೆಯ ಅಕ್ರಮಗಳನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಏಕಾಏಕಿ ಹದಗೆಟ್ಟಿದೆ. ಅವರನ್ನು ಇಷ್ಟದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕೋರಿ ಪತ್ನಿ ಗೀತಾಂಜಲಿ ಆಂಗ್ಮೊ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಪೀಠವು ಸಂವಿಧಾನದ ವಿಧಿ 19 ಮತ್ತು 21ರ ಅನ್ವಯ ಸೂಕ್ತ ಚಿಕಿತ್ಸೆ ಪಡೆಯುವುದು ಮೂಲಭೂತ ಹಕ್ಕು ಎಂದು ಸ್ಪಷ್ಟಪಡಿಸಿ, ತಕ್ಷಣವೇ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ರವಾನಿಸಲು ಸೂಚಿಸಿತು.

ಬಿಗಿ ಭದ್ರತೆಯಲ್ಲಿ ಐಸಿಯುಗೆ ದಾಖಲು

ನ್ಯಾಯಾಲಯದ ನಿರ್ದೇಶನದಂತೆ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಆಂಬುಲೆನ್ಸ್‌ನಲ್ಲಿ ಅವರನ್ನು ಮೇದಾಂತ ಆಸ್ಪತ್ರೆಗೆ ಕರೆತರಲಾಯಿತು. ಸದ್ಯ ಅವರನ್ನು ಐಸಿಯುನಲ್ಲಿ ಇರಿಸಲಾಗಿದ್ದು, ವೈದ್ಯರ ವಿಶೇಷ ತಂಡವು ಸತತವಾಗಿ ಅವರ ಸ್ಥಿತಿಗತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.

ಮಧ್ಯರಾತ್ರಿ ವೈದ್ಯರೊಂದಿಗೆ ಸಚಿವರ ಸಮಾಲೋಚನೆ

ಘಟನೆಯ ಗಂಭೀರತೆ ಅರಿತ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಮಧ್ಯರಾತ್ರಿ 12:30ರ ವೇಳೆಗೆ ಆಸ್ಪತ್ರೆಗೆ ಭೇಟಿ ನೀಡಿದರು. ವೈದ್ಯರನ್ನು ಭೇಟಿಯಾದ ನಾಯಕರು, ವಾಂಗ್ಚುಕ್ ಅವರ ಚಿಕಿತ್ಸೆಯ ಕುರಿತು ವಿವರವಾದ ಮಾಹಿತಿ ಪಡೆದುಕೊಂಡು ಕ್ಷೇಮ ವಿಚಾರಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !