July 23, 2026
Thursday, July 23, 2026
spot_img

NEET ಪರೀಕ್ಷೆ ವೈಫಲ್ಯ: ಪ್ರಧಾನಿ ಮೋದಿಗೆ ಕರ್ನಾಟಕದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಾಲು ಸಾಲು ಅಕ್ರಮಗಳ ಕುರಿತಾಗಿ ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಪರೀಕ್ಷಾ ಪ್ರಕ್ರಿಯೆಯನ್ನು ಸರಿಯಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅವರು ಪತ್ರದಲ್ಲಿ ನೇರವಾಗಿ ಆರೋಪಿಸಿದ್ದಾರೆ.

ಶಾಂತಿಯುತ ಹಕ್ಕನ್ನು ಕಸಿಯಲಾಗುತ್ತಿದೆ

ರಾಜಧಾನಿ ದೆಹಲಿಯಲ್ಲಿ ಭವಿಷ್ಯಕ್ಕಾಗಿ ರಸ್ತೆಗಿಳಿದು ನ್ಯಾಯ ಕೇಳುತ್ತಿರುವ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ತೋರುತ್ತಿರುವ ಧೋರಣೆಯನ್ನು ಅವರು ಕಟುವಾಗಿ ವಿಮರ್ಶಿಸಿದ್ದಾರೆ. ತಮ್ಮ ಹಕ್ಕಿಗಾಗಿ ಧ್ವನಿ ಎತ್ತುತ್ತಿರುವ ಯುವಕರ ಶಾಂತಿಯುತ ಪ್ರತಿಭಟನೆಯನ್ನು ಬಲವಂತವಾಗಿ ಹತ್ತಿಕ್ಕಲು ಯತ್ನಿಸುತ್ತಿರುವುದು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂವಾದದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ

ದೇಶದ ಭವಿಷ್ಯವಾಗಿರುವ ಯುವಜನತೆಗೆ ತಮ್ಮ ಭವಿಷ್ಯದ ಕುರಿತು ಸರ್ಕಾರವನ್ನು ಪ್ರಶ್ನಿಸುವ ಸಂಪೂರ್ಣ ಹಕ್ಕಿದೆ. ಆದ್ದರಿಂದ ಕೂಡಲೇ ಪ್ರತಿಭಟನಾ ಸ್ಥಳದಲ್ಲಿ ಹಾಕಲಾಗಿರುವ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಬೇಕು. ಹೋರಾಟ ನಿರತ ವಿದ್ಯಾರ್ಥಿಗಳೊಂದಿಗೆ ನೇರ ಮಾತುಕತೆ ನಡೆಸಿ, ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಬೇಕೆಂದು ಡಾ. ಜಿ. ಪರಮೇಶ್ವರ್ ಅವರು ಪ್ರಧಾನಿಯವರನ್ನು ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !