July 24, 2026
Friday, July 24, 2026
spot_img

ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ; ಎರಡು ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ

ಹೊಸದಿಗಂತ ವರದಿ ಬೆಲಗಾವಿ;

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಜಕ್ಕಬಾಳ ಗ್ರಾಮದ ಬಳಿ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಜಕ್ಕಬಾಳ ಮತ್ತು ಬಸರಗಿ ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದ ಘಟನೆ ಸಂಚಲನ ಮೂಡಿಸಿದೆ. ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಒಂದೇ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ.

ಜಕ್ಕಬಾಳ ಗ್ರಾಮದ ಕೆಲ ಯುವಕರು ಬಸರಗಿ ಗ್ರಾಮದ ವಿದ್ಯಾರ್ಥಿನಿಯರನ್ನು ಚುಡಾಯಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಆರಂಭವಾದ ಮಾತಿನ ಚಕಮಕಿ ಬಳಿಕ ತೀವ್ರ ವಾಗ್ವಾದಕ್ಕೆ ತಿರುಗಿದೆ. ನಂತರ ಬಸ್ನಿಂದ ಕೆಳಗಿಳಿದ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪರಸ್ಪರ ಬೆಲ್ಟ್ ಹಾಗೂ ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯನ್ನು ಕಂಡ ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿದರು. ಸವದತ್ತಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಇದನ್ನೂ ಓದಿ:

ಈ ಘಟನೆ ಬಸ್ಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಕುರಿತು ಮತ್ತೆ ಆತಂಕ ಮೂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವೆರೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !