July 26, 2026
Sunday, July 26, 2026
spot_img

ನೀಟ್ ಬಿಕ್ಕಟ್ಟಿನ ನಡುವೆ ಶಿಕ್ಷಣ ಇಲಾಖೆ ಹೊಣೆ ಹೊತ್ತ ಜೋಶಿ: ದೆಹಲಿಯಲ್ಲಿ ಮಹತ್ವದ ಅಧಿಕಾರಿಗಳ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನಿನ್ನೆ (ಜುಲೈ 25) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಯವರು ಈ ರಾಜೀನಾಮೆಯನ್ನು ಅಂಗೀಕರಿಸಿದ ತಕ್ಷಣವೇ ಶಿಕ್ಷಣ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನು ಕನ್ನಡಿಗ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ವಹಿಸಲಾಗಿದೆ. ಇದರ ಬೆನ್ನಲ್ಲೇ ಇಂದು ಅಧಿಕಾರ ಸ್ವೀಕರಿಸಿದ ಜೋಶಿಯವರು, ತಮ್ಮ ಮೊದಲ ಅಧಿಕೃತ ಸಭೆಯಲ್ಲೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಜವಾಬ್ದಾರಿ ಸ್ವೀಕಾರ ಮತ್ತು ಸಭೆ

ಇಂದು ನವದೆಹಲಿಯ ಕರ್ತವ್ಯ ಭವನದಲ್ಲಿ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ ಜೋಶಿ, ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಪರಾಮರ್ಶನಾ ಸಭೆ ನಡೆಸಿದರು. ದೇಶದ ಶಿಕ್ಷಣ ವ್ಯವಸ್ಥೆಯ ಮೇಲಾಗಿರುವ ಆಘಾತ ಮತ್ತು ವಿದ್ಯಾರ್ಥಿಗಳಲ್ಲಿ ಮೂಡಿರುವ ಆತಂಕವನ್ನು ನಿವಾರಿಸುವುದು ತಮ್ಮ ಮೊದಲ ಆದ್ಯತೆ ಎಂದು ಸಚಿವರು ಸ್ಪಷ್ಟಪಡಿಸಿದರು. ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ:

ಅಧಿಕಾರಿಗಳಿಗೆ ಖಡಕ್ ಸೂಚನೆಗಳು

ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ಪರೀಕ್ಷಾ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಮರುಕಳಿಸಬಾರದು. ವ್ಯವಸ್ಥೆಯ ಪಾರದರ್ಶಕತೆಗೆ ಧಕ್ಕೆ ತರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು. ಇಲಾಖೆಯ ಪ್ರಮುಖ ಯೋಜನೆಗಳ ಅನುಷ್ಠಾನ ಹಾಗೂ ಪ್ರಸ್ತುತ ಉದ್ಭವಿಸಿರುವ ಬಿಕ್ಕಟ್ಟನ್ನು ಶೀಘ್ರವಾಗಿ ಬಗೆಹರಿಸಲು ಕಟ್ಟುನಿಟ್ಟಿನ ಕಾರ್ಯಸೂಚಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !