July 26, 2026
Sunday, July 26, 2026
spot_img

NEET ವಿವಾದ ರಾಜಕೀಯಕ್ಕೆ ಬಳಕೆ ಬೇಡ: ರಾಹುಲ್ ಗಾಂಧಿ ವಿರುದ್ಧ ಸುಧಾಕರ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ರಾಜಕೀಯ ವಿಚಾರವನ್ನಾಗಿಸದೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೋಡಬೇಕು ಎಂದು ಸಂಸದ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಸುಧಾಕರ್ ಟೀಕೆ

ವಿದ್ಯಾರ್ಥಿಗಳ ಹೋರಾಟ ಹಾಗೂ ವಿವಿಧ ನೇಮಕಾತಿ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ನಾಯಕರು ಸಮರ್ಪಕ ಗಮನ ಹರಿಸಿಲ್ಲ ಎಂದು ಆರೋಪಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದ್ಯಾರ್ಥಿಗಳ ಸಮಸ್ಯೆಗಿಂತ ರಾಜಕೀಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಪೇಪರ್ ಲೀಕ್ ಗಂಭೀರ ಅಪರಾಧ

ಪ್ರಶ್ನೆಪತ್ರಿಕೆ ಸೋರಿಕೆಯನ್ನು ಅಕ್ಷಮ್ಯ ಅಪರಾಧವೆಂದು ಬಣ್ಣಿಸಿದ ಅವರು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಯಲ್ಲಿದೆ ಎಂದು ಹೇಳಿದರು.

ಇದನ್ನೂ ಓದಿ:

ಧರ್ಮೇಂದ್ರ ಪ್ರಧಾನ್ ಪರ ಬ್ಯಾಟಿಂಗ್

ನೀಟ್ ಪರೀಕ್ಷೆ ನಡೆಸಿದ ಸಂಸ್ಥೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಕರಣಕ್ಕೆ ಕಾರಣವಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವೈಯಕ್ತಿಕ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.

ತನಿಖೆ ಮುಂದುವರಿದಿದೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ಸುಧಾಕರ್ ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !