July 27, 2026
Monday, July 27, 2026
spot_img

ಕಾಡುಹಂದಿ ಬೇಟೆಗೆ ಇರಿಸಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿ ಸಾ*ವು : ಮೂವರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಡುಹಂದಿ ಬೇಟೆಗೆ ಇರಿಸಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕರಿಯಪ್ಪ (52) ವಿದ್ಯುತ್‌ ತಂತಿ ತುಳಿದು ಸಾವನ್ನಪ್ಪಿದ ವ್ಯಕ್ತಿ. ಈ ಸಂಬಂಧ ಚಂದ್ರಪ್ಪ, ಕೆಂಚಪ್ಪ ಹಾಗೂ ಯದುಕುಮಾರ ಎಂಬ ಮೂವರು ಆರೋಪಿಗಳನ್ನು ಯಗಟಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಾಡುಹಂದಿ ಬೇಟೆಗೆ ಜಮೀನಿನಲ್ಲಿ ವಿದ್ಯುತ್‌ ತಂತಿ ಅಳವಡಿಸಿದ್ದರು. ಆ ಸ್ಥಳಕ್ಕೆ ಹೋಗಿದ್ದ ಕರಿಯಪ್ಪ ವಿದ್ಯುತ್‌ ಶಾಕ್‌ಗೆ ಬಲಿಯಾಗಿದ್ದರು. ಈ ವಿಚಾರ ಯಾರಿಗೂ ಗೊತ್ತಾಗದಂತೆ ಆರೋಪಿಗಳು ಶವವನ್ನು ಜಮೀನಿನಲ್ಲಿ ಹೂತು ಹಾಕಿದ್ದರು.

ಕರಿಯಪ್ಪ ಮನೆಯಿಂದ ತೆರಳಿದ್ದವರು ವಾಪಸ್‌ ಆಗದೇ ಇದ್ದಾಗ ಕುಟುಂಬಸ್ಥರು ಗ್ರಾಮದಲ್ಲಿ ಹುಡುಕಾಟ ನಡೆಸಿದ್ದರು. ಅವರು ಪತ್ತೆಯಾಗದೇ ಇದ್ದಾಗ ಪೊಲೀಸ್‌ ಠಾಣೆಗೆ ದೂರನ್ನು ನೀಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !