July 27, 2026
Monday, July 27, 2026
spot_img

ಅಯೋಧ್ಯೆ ದೇಣಿಗೆ ಕಳ್ಳತನ ತನಿಖೆಗೆ ಹೊಸ ಟ್ವಿಸ್ಟ್: ತನಿಖಾ ತಂಡಕ್ಕೆ ಚಾರ್ಟರ್ಡ್ ಅಕೌಂಟೆಂಟ್‌ ಸೇರಿಸಲು ಸುಪ್ರೀಂ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆ ರಾಮ ಮಂದಿರದ ದೇಣಿಗೆ ಕಳವು ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಹೊಸ ವಿಶೇಷ ತನಿಖಾ ತಂಡ (SIT) ರಚಿಸಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಕಿರಣ್ ಎಸ್ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ತನಿಖಾ ತಂಡಕ್ಕೆ ಚಾರ್ಟರ್ಡ್ ಅಕೌಂಟೆಂಟ್‌ರನ್ನು ಸೇರಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಹಿರಿಯ ಅಧಿಕಾರಿಗಳಿಂದ ಎಸ್‌ಐಟಿ ಪುನರ್‌ರಚನೆ

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ಕಿರಣ್ ಎಸ್ ಅವರೊಂದಿಗೆ ಅಯೋಧ್ಯೆ ಡಿಐಜಿ ಸೋಮೇನ್ ವರ್ಮಾ ಹಾಗೂ ಎಸ್‌ಎಸ್‌ಪಿ ಗೌರವ್ ಗ್ರೋವರ್ ಕೂಡ ಎಸ್‌ಐಟಿಯಲ್ಲಿ ಸದಸ್ಯರಾಗಿದ್ದಾರೆ.

ದೇಣಿಗೆ ವಿವರ ಪರಿಶೀಲನೆಗೆ ಸೂಚನೆ

ರಾಮ ಮಂದಿರಕ್ಕೆ ಬಂದಿರುವ ಎಲ್ಲಾ ದೇಣಿಗೆಗಳ ದಾಖಲೆಗಳನ್ನು ಎಸ್‌ಐಟಿಗೆ ಒದಗಿಸುವಂತೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಸರ್ಕಾರಕ್ಕೆ ಸೂಚಿಸಿದೆ. ತನಿಖೆ ವೇಗವಾಗಿ, ಪಾರದರ್ಶಕವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:

ಎರಡು ವಾರದಲ್ಲಿ ವರದಿ ಸಲ್ಲಿಕೆ

ತನಿಖಾ ತಂಡಕ್ಕೆ ಚಾರ್ಟರ್ಡ್ ಅಕೌಂಟೆಂಟ್ ಸೇರಿಸಿ, ಎರಡು ವಾರಗಳೊಳಗೆ ಪ್ರಗತಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುಂದೆಯೂ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.

ಈಗಾಗಲೇ ಎಂಟು ಆರೋಪಿಗಳ ಬಂಧನ

ರಾಮ ಮಂದಿರದ ದೇಣಿಗೆ ಹಣ ಎಣಿಕೆ ಕಾರ್ಯದಲ್ಲಿ ತೊಡಗಿದ್ದ ಎಂಟು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇದೇ ಪ್ರಕರಣದ ನೈತಿಕ ಹೊಣೆ ಹೊತ್ತು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ರಾಜೀನಾಮೆ ನೀಡಿದ್ದರು. ಬಳಿಕ ಬ್ಯಾಂಕ್‌ನ ಭದ್ರತಾ ನಿಯಮಗಳ ನಿರ್ಲಕ್ಷ್ಯದ ಬಗ್ಗೆ ಅವರು ಪ್ರಶ್ನೆ ಎತ್ತಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !