July 28, 2026
Tuesday, July 28, 2026
spot_img

ಲೋಕಸಭೆ ಹೊರಗೆ ರಾಹುಲ್ ಗಾಂಧಿ ವಾಗ್ಬಾಣ: ಶಿಕ್ಷಣ ಸಚಿವರ ಆಯ್ಕೆ ಖಂಡಿಸಿ ಕೇಂದ್ರದ ವಿರುದ್ಧ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ತಿನ ಲೋಕಸಭಾ ಕಲಾಪದ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನೂತನವಾಗಿ ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿರುವ ಸಚಿವ ಪ್ರಹ್ಲಾದ್ ಜೋಶಿ ಅವರನ್ನು “ಅತ್ಯಾಚಾರಿಗಳ ರಕ್ಷಕ” ಎಂದು ಕರಿದು ಗಂಭೀರ ಆರೋಪ ಮಾಡಿದರು.

‘ಬಿಜೆಪಿಯಿಂದ ಅಪರಾಧಿಗಳ ಪರ ನಿಲ್ಲುವ ವ್ಯಕ್ತಿಗೆ ಪ್ರಮುಖ ಖಾತೆ’

ದೇಶದ ಶಿಕ್ಷಣ ವ್ಯವಸ್ಥೆಯನ್ನು ಮುನ್ನಡೆಸಲು ಕೇಂದ್ರ ಸರ್ಕಾರ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರಾಹುಲ್, ಬಿಜೆಪಿಯು ಅತ್ಯಾಚಾರಿಗಳನ್ನು ಬೆಂಬಲಿಸುವ ಪ್ರವೃತ್ತಿ ಹೊಂದಿರುವ ವ್ಯಕ್ತಿಯನ್ನು ದೇಶದ ಪ್ರಮುಖ ಹುದ್ದೆಯಲ್ಲಿ ತಂದುಕೂರಿಸಿದೆ ಎಂದರು. ಲೈಂಗಿಕ ಅಪರಾಧಿಗಳಿಗೆ ರಕ್ಷಣೆ ನೀಡುವ ಹೇಳಿಕೆಗಳನ್ನು ನೀಡುವವರಿಗಿಂತ ಅಪಾಯಕಾರಿ ವ್ಯಕ್ತಿ ಬೇರೊಬ್ಬರಿರಲು ಸಾಧ್ಯವಿಲ್ಲ, ಅಂತಹ ವ್ಯಕ್ತಿ ಇಂದು ಭಾರತದ ಶಿಕ್ಷಣ ಸಚಿವನಾಗಿರುವುದು ದುರಂತ ಎಂದು ಕಳವಳ ವ್ಯಕ್ತಪಡಿಸಿದರು.

ಬಿಲ್ಕಿಸ್ ಬಾನು ಪ್ರಕರಣದ ಸಮರ್ಥನೆಗೆ ವಿರೋಧ

ಚರ್ಚೆಯ ವೇಳೆ ಬಿಲ್ಕಿಸ್ ಬಾನು ಪ್ರಕರಣವನ್ನು ಉಲ್ಲೇಖಿಸಿದ ಅವರು, ಪ್ರಕರಣದ ಅಪರಾಧಿಗಳ ಶಿಕ್ಷೆ ರದ್ದತಿ ಮತ್ತು ಬಿಡುಗಡೆಯನ್ನು ಸಮರ್ಥಿಸಿಕೊಂಡಿದ್ದ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣದಂತಹ ಸೂಕ್ಷ್ಮ ಹಾಗೂ ಜವಾಬ್ದಾರಿಯುತ ಖಾತೆಯನ್ನು ನೀಡಬಾರದಿತ್ತು ಎಂದು ಪ್ರತಿಪಾದಿಸಿದರು. ಪ್ರಧಾನಮಂತ್ರಿಯವರ ಸಚಿವ ಸಂಪುಟದಲ್ಲಿ ಅನೇಕ ಸಮರ್ಥ ನಾಯಕರಿದ್ದರೂ, ಅತ್ಯಾಚಾರದಂತಹ ಘೋರ ಅಪರಾಧ ಎಸಗಿದವರನ್ನು ಬೆಂಬಲಿಸಿದ ವ್ಯಕ್ತಿಯನ್ನೇ ಆರಿಸಿ ಶಿಕ್ಷಣ ಸಚಿವರನ್ನಾಗಿ ಮಾಡಿರುವುದು ಕೇಂದ್ರ ಸರ್ಕಾರದ ಧೋರಣೆಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !