July 31, 2026
Friday, July 31, 2026
spot_img

ಹೊಸದಿಗಂತದ ವಾದಿರಾಜ್ ಕಮರೂರು, ಸುರೇಶ್ ಡಿ ಪಳ್ಳಿ ಸಹಿತ ಪತ್ರಿಕೋದ್ಯಮ ಕ್ಷೇತ್ರದ ಒಂಬತ್ತು ಮಂದಿಗೆ ‘ನಾರದ ಪುರಸ್ಕಾರ’ ಗೌರವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ರಾಮಭಾರತಿ ಟ್ರಸ್ಟ್ ಕಾರಣಗಿರಿ ಹಾಗೂ ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿವಾಹಕ ನಾರದರ ಸಂಸ್ಮರಣಾರ್ಥ ಪ್ರತಿಷ್ಠಿತ ‘ನಾರದ ಪುರಸ್ಕಾರ’ ಪ್ರದಾನ ಸಮಾರಂಭವು ಆ. 4ರಂದು ಸಂಜೆ 4 ಗಂಟೆಗೆ ಕಾರಣಗಿರಿಯ ಸಿದ್ಧಿವಿನಾಯಕ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆಯ ಪ್ರಧಾನ ಸಂಪಾದಕರಾದ ಹಾದಿಗಲ್ಲು ಲಕ್ಷ್ಮೀನಾರಾಯಣ ವಹಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮಗ್ರ ಕರ್ನಾಟಕ ಪ್ರಾಂತದ ಪ್ರಚಾರ ಪ್ರಮುಖ್ ಅರುಣ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ:

ಕಾರಣಗಿರಿ ರಾಷ್ಟ್ರೋತ್ಥಾನ ಬಳಗ ಹಾಗೂ ಶ್ರೀ ವಾದಿರಾಜ ಸಂಸ್ಕೃತಿ ಸಂವರ್ಧನಾ ಸಭಾ, ಹಾದಿಗಲ್ಲು ಸಹಯೋಗದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಗಣ್ಯರಿಗೆ ‘ನಾರದ ಪುರಸ್ಕಾರ’ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಾರಣಗಿರಿ ಕಲಾದರ್ಶನ ಮಾಸಪತ್ರಿಕೆಯ ಸಂಪಾದಕ, ಗ್ರಾಮಭಾರತಿ ಟ್ರಸ್ಟ್‌ನ ಅಧ್ಯಕ್ಷ ಹನಿಯ ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ನಾರದ ಪುರಸ್ಕಾರಕ್ಕೆ ಕನ್ನಡ ನ್ಯೂಸ್ ಅಂತರ್ಜಾಲ ಪತ್ರಿಕೆಯ ಸಂಪಾದಕ ರಘುಪತಿ ಯಾಜಿ, ಪರಿಸರ ಪತ್ರಕರ್ತ ರಘುನಂದನ್ ಭಟ್ ನರೂರ, ಆಕಾಶವಾಣಿಯ ನಿವೃತ್ತ ನಿರ್ದೇಶಕ ಡಾ. ಸುಂದ್ರ, ಹಿರಿಯ ಪತ್ರಿಕಾ ಪ್ರತಿನಿ ಗಣಪತಿ ಪಂಡಿತ್, ಹೊಸ ದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ, ಟಿ.ವಿ. ವರದಿಗಾರ್ತಿ ಶೈಲಜಾ ಗೊರ್ನಮನೆ, ಹೊಸ ದಿಗಂತ ಶಿವಮೊಗ್ಗದ ಸಂಪಾದಕ ವಾದಿರಾಜ್ ಕಮರೂರು, ಶ್ರೀಧರ ಸಂದೇಶ ಸಂಪಾದಕ ಗಜಾನನ ಭಟ್ಟ ರೇವಣಕಟ್ಟ ಹಾಗೂ ಅಂಕಣಕಾರ-ಲೇಖಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಆಯ್ಕೆಯಾಗಿದ್ದಾರೆ ಎಂದವರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !