ಹೊಸದಿಗಂತ ವರದಿ ಮಡಿಕೇರಿ:
ಮಡಿಕೇರಿ: ಕಾವೇರಿಯ ಉಗಮ ಸ್ಥಳವಾದ ತಲಕಾವೇರಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ಮಳೆಯಿಂದಾಗಿ ಭಾನುವಾರ ತೀರ್ಥರೂಪಿಣಿ ಮಾತೆ ಕಾವೇರಿ ಶ್ರೀ ಭಗಂಡೇಶ್ವರ ದೇವಾಲಯದ ಎರಡು ಮೆಟ್ಟಿಲುಗಳನ್ನು ಸ್ಪರ್ಶಿಸಿರುವ ಹಿನ್ನೆಲೆಯಲ್ಲಿ ಮಾತೆ ಕಾವೇರಿಗೆ ಪ್ರಧಾನ ಅರ್ಚಕ ಹರೀಶ್ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಇದನ್ನೂ ಓದಿ;
ಜಿಲ್ಲಾಡಳಿತ ಮುನ್ನೆಚ್ಚರಿಕೆ:
ಭಾಗಮಂಡಲದ ಪ್ರಮುಖ ಸಂಪರ್ಕ ರಸ್ತೆಗಳ ಮೇಲೆ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ ತೀರಕ್ಕೆ ತೆರಳದಂತೆ ಕೊಡಗು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ತುರ್ತು ಪರಿಸ್ಥಿತಿಯನ್ನು ಎದುರಿಸಲು ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿವೆ.



