ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಭಾಗಗಳಲ್ಲಿ ತಲೆದೂರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮತ್ತು ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಮಹತ್ವದ ಟಾಸ್ಕ್ ನೀಡಿದ್ದಾರೆ. ರಾಜ್ಯಾದ್ಯಂತ ಬರ ಪರಿಸ್ಥಿತಿಯ ನಿಖರ ಗ್ರೌಂಡ್ ರಿಯಾಲಿಟಿ ತಿಳಿಯಲು ಸಚಿವರಿಗೆ ಜಿಲ್ಲಾವಾರು ಉಸ್ತುವಾರಿ ಹೊಣೆ ವಹಿಸಲಾಗಿದ್ದು, ತಕ್ಷಣವೇ ಪ್ರವಾಸ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಸಚಿವರಿಗೆ ಕಣಕ್ಕಿಳಿಯಲು ಸೂಚನೆ:
ರಾಜಧಾನಿಯ ಸಭೆಗಳಿಗೆ ಸೀಮಿತವಾಗದೆ, ಸಚಿವರು ತಮಗೆ ಹಂಚಿಕೆ ಮಾಡಲಾಗಿರುವ ಜಿಲ್ಲೆಗಳಿಗೆ ತಕ್ಷಣವೇ ಭೇಟಿ ನೀಡಬೇಕು ಎಂದು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಹಳ್ಳಿ ಹಳ್ಳಿಗಳಿಗೆ ಭೇಟಿ ನೀಡಿ ಕುಡಿಯುವ ನೀರು, ಜಾನುವಾರುಗಳ ಮೇವು ಮತ್ತು ಬೆಳೆ ಹಾನಿಯ ನೈಜ ಸ್ಥಿತಿಯನ್ನು ಪರಿಶೀಲಿಸಲು ಗಡುವು ವಿಧಿಸಲಾಗಿದೆ.
ಜಿಲ್ಲಾವಾರು ಜವಾಬ್ದಾರಿ ಹಂಚಿಕೆ:
ಬರ ಪರಿಸ್ಥಿತಿ ತೀವ್ರವಾಗಿರುವ ಉತ್ತರ ಒಳನಾಡು ಮತ್ತು ಬಯಲು ಸೀಮೆ ಜಿಲ್ಲೆಗಳಿಗೆ ಹಿರಿಯ ಸಚಿವರನ್ನು ನಿಯೋಜಿಸಲಾಗಿದೆ. ಪ್ರತಿಯೊಬ್ಬ ಸಚಿವರೂ ತಮ್ಮ ಉಸ್ತುವಾರಿ ಜಿಲ್ಲೆಯಲ್ಲಿ ಕ್ಯಾಂಪ್ ಹೂಡಿ, ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿವೆಯೇ ಎಂಬುದನ್ನು ಖುದ್ದಾಗಿ ಮೇಲ್ವಿಚಾರಣೆ ಮಾಡಲಿದ್ದಾರೆ. ನಿರಸನ ಹಾಗೂ ವಿಳಂಬ ಧೋರಣೆ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಚಿವರಿಗೆ ಪೂರ್ಣ ಅಧಿಕಾರ ನೀಡಲಾಗಿದೆ.
ತಳಮಟ್ಟದ ಸಮಗ್ರ ವರದಿ ಸಲ್ಲಿಕೆಗೆ ಸೂಚನೆ:
ಪ್ರವಾಸ ಮುಗಿದ ತಕ್ಷಣವೇ ಪ್ರತಿಯೊಬ್ಬ ಸಚಿವರೂ ತಮ್ಮ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ತಳಮಟ್ಟದ ಸಮಗ್ರ ವರದಿಯನ್ನು ಕಂದಾಯ ಸಚಿವರಿಗೆ ಸಲ್ಲಿಸಬೇಕಾಗಿದೆ. ಈ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನಿಧಿಗಾಗಿ ಹೆಚ್ಚುವರಿ ಪ್ರಸ್ತಾವನೆ ಸಲ್ಲಿಸಲು ಮತ್ತು ರಾಜ್ಯ ಬಜೆಟ್ನಿಂದ ತುರ್ತು ಹಣ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ.
ಇದನ್ನU Odi:
ಕುಡಿಯುವ ನೀರು ಮತ್ತು ಮೇವಿಗೆ ಮೊದಲ ಆದ್ಯತೆ:
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗದಂತೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಮತ್ತು ಜಾನುವಾರುಗಳ ರಕ್ಷಣೆಗಾಗಿ ತಕ್ಷಣವೇ ಮೇವಿನ ಬ್ಯಾಂಕುಗಳನ್ನು ತೆರೆಯಲು ಸಚಿವರಿಗೆ ಸೂಚಿಸಲಾಗಿದೆ.
ಬರಗಾಲ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿನ ನೀರಿನ ಸಮಸ್ಯೆ ಬಗ್ಗೆಯೂ ಚರ್ಚೆಯಾಗಿದೆ. ಈಗ ಮಳೆಯಿಂದಾಗಿ ತಾತ್ಕಾಲಿಕವಾಗಿ ಸಮಸ್ಯೆ ನಿವಾರಣೆಯಾಗಿರಬಹುದು, ಆದರೆ ಭೀಕರ ಕಂಟಕವೊಂದು ಎದುರಾಗಿತ್ತು. ದೇವರ ಕೃಪೆಯಿಂದ ಸದ್ಯಕ್ಕೆ ಅದು ನಿವಾರಣೆಯಾಗಿದೆ. ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಲಾಗಿತ್ತು, ಆದರೆ ನಾವು 30 ಸಾವಿರ ಕ್ಯೂಸೆಕ್ ನೀರು ಹರಿಸುವಂತಾಗಿದೆ.
ನಾನು ಈಗಾಗಲೇ ಬೆಳಗಾವಿ, ಚಿತ್ರದುರ್ಗ, ಕಲಬುರಗಿ ವಿಭಾಗಗಳಲ್ಲಿ ಸಭೆ ನಡೆಸಿದ್ದು, ಮೈಸೂರು ವಿಭಾಗದ ಸಭೆಯನ್ನು ಶೀಘ್ರವೇ ನಡೆಸಲಾಗುವುದು. ಎಲ್ಲರ ಸಲಹೆ ಪಡೆಯಲಾಗಿದ್ದು, ಕುಡಿಯುವ ನೀರಿನ ಉದ್ದೇಶಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.



