ಹೊಸದಿಗಂತ ಡಿಜಿಟಲ್ ಡೆಸ್ಕ್:
ನೈಋತ್ಯ ಮಾನ್ಸೂನ್ ಚುರುಕಾಗಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ತೀರದಲ್ಲಿ ರಭಸದಿಂದ ಬಿರುಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಎಲ್ಲೆಲ್ಲಿ ಜೋರು ಮಳೆ?

ದಕ್ಷಿಣ ಕನ್ನಡ
ಉಡುಪಿ
ಉತ್ತರ ಕನ್ನಡ
ಶಿವಮೊಗ್ಗ
ಚಿಕ್ಕಮಗಳೂರು
ಕೊಡಗು
ಎಲ್ಲೆಲ್ಲಿ ಮೋಡಕವಿದ ವಾತಾವರಣ?

ಹಾಸನ
ಮಂಡ್ಯ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ನಗರ
ಎಲ್ಲೆಲ್ಲಿ ಸಾಧಾರಣ ಮಳೆ?

ಬೆಳಗಾವಿ
ಧಾರವಾಡ
ಹಾವೇರಿ
ರಾಯಚೂರು
ಕಲಬುರಗಿ



