ಹೊಸದಿಗಂತ ವರದಿ ಯಾದಗಿರಿ:
ಭೀಮಾನದಿಗೆ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ರೈತರ ಜಮೀನಿಗೆ ನುಗ್ಗಿದ್ದು ಕೆಲಕಾಲ ಸ್ಥಳೀಯರಲ್ಲಿ ಆತಂಕ ಮನೆಮಾಡಿತ್ತು.
ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಬೀರನಾಳ ಗ್ರಾಮದ ಭೀಮಾ ನದಿ ತೀರದ ಗದ್ದೆಯಲ್ಲಿ ಕಾಣಿಸಿದ ಮೊಸಳೆ ಕಂಡು ರೈತ ಮಹಿಳೆಯರು ಆತಂಕಕ್ಕೆ ಒಳಗಾಗಿ ಕಿರಿಚಾಡಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ಮೊಸಳೆ ರಕ್ಷಣೆ ಮಾಡುವಂತೆ ರೈತರ ಆಗ್ರಹಿಸಿದರು.
ಇದನ್ನೂ ಓದಿ:
ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯರ ಸಹಾಯದಿಂದ ಮೊಸಳೆ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.



