ಹೊಸದಿಗಂತ ವರದಿ ಅಂಕೋಲಾ:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಸೋಮವಾರ ಭೇಟಿ ಮಾಡಿದ ಉ.ಕ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕುರಿತಂತೆ ಮಾಹಿತಿ ನೀಡಿದರು.
ಕ್ಷೇತ್ರದ ವೈಶಿಷ್ಟತೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಿಯವರು, ಕ್ಷೇತ್ರದ ಸಮಗ್ರ ವಿಕಾಸದ ವಿಷಯವಾಗಿ ತಮ್ಮ ವಿಶಾಲ ದೃಷ್ಟಿಕೋನದ ವಿಚಾರಗಳನ್ನು ಹಂಚಿಕೊಂಡು ಮಾರ್ಗದರ್ಶನ ನೀಡಿದರು ಎಂದು ಸಂಸದ ಕಾಗೇರಿ ತಿಳಿಸಿದ್ದಾರೆ.



