ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡಿನಲ್ಲಿ ಮಳೆ ಜೋರಾಗುತ್ತಿದ್ದಂತೆ ರಸ್ತೆ ಪ್ರಯಾಣವೂ ಸವಾಲಾಗುತ್ತಿದೆ. ಶೃಂಗೇರಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡದ ಮಣ್ಣು ಜಾರಿದ್ದು, ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಹೆದ್ದಾರಿಗೆ ಕುಸಿದ ಗುಡ್ಡ
ಶೃಂಗೇರಿ ತಾಲೂಕಿನ ಕಡೇಮನೆ ಗ್ರಾಮದ ಬಳಿ ಗುಡ್ಡದ ಒಂದು ಭಾಗ ಕುಸಿದು ರಸ್ತೆಗೆ ಬಿದ್ದಿದೆ. ಮಣ್ಣು ಜಾರುವುದರ ಜೊತೆಗೆ ಮರಗಳೂ ರಸ್ತೆಗೆ ಉರುಳಿದ್ದು, ಕಾರ್ಕಳ-ಮಂಗಳೂರು-ಶೃಂಗೇರಿ ನಡುವಿನ ಸಂಚಾರಕ್ಕೆ ತೊಂದರೆಯಾಗಿದೆ.
ಇದನ್ನೂ ಓದಿ:
ತೆರವು ಕಾರ್ಯಾಚರಣೆ ಚುರುಕು
ರಸ್ತೆಗೆ ಬಿದ್ದಿರುವ ಮಣ್ಣು ಹಾಗೂ ಮರಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಆದರೆ ಮಳೆ ಮುಂದುವರಿದಿರುವುದರಿಂದ ಗುಡ್ಡದಿಂದ ಮತ್ತೆ ಮತ್ತೆ ಮಣ್ಣು ಜಾರುತ್ತಿರುವುದು ಕಾರ್ಯಾಚರಣೆಗೆ ಸವಾಲಾಗಿದೆ.
ವಾಹನ ಸವಾರರಿಗೆ ಎಚ್ಚರಿಕೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಮಳೆ ಹೆಚ್ಚಾದ ಸಂದರ್ಭದಲ್ಲಿ ಗುಡ್ಡ ಪ್ರದೇಶಗಳಲ್ಲಿ ಮತ್ತಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಅನಗತ್ಯ ಪ್ರಯಾಣ ತಪ್ಪಿಸುವಂತೆ ಸಲಹೆ ನೀಡಲಾಗಿದೆ.



