ಹೊಸದಿಂತ ವರದಿ ವಿಜಯಪುರ:
ವಿಜಯಪುರ ಜಿಲ್ಲೆಯ ಗುಮ್ಮಟ ನಗರಿಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು.
ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸಲ್ಲಿಸಿದರು.
ಆಕರ್ಷಕ ಪಥಸಂಚಲನ, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದ್ದು, ದೇಶಾಭಿಮಾನದ ಸಂತಸ ಕಳೆಗಟ್ಟಿತ್ತು.
ಇದನ್ನೂ ಓದಿ:
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮೇಯರ್ ಎಂ.ಎಸ್. ಕರಡಿ, ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಪಂ ಸಿಇಒ ರಿಷಿ ಆನಂದ, ಎಸ್ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಗಣ್ಯರು, ಮುಖಂಡರು ಇದ್ದರು.



