ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳು ಸಂಪೂರ್ಣ ಆಧಾರರಹಿತ ಮತ್ತು ಕೇವಲ ವದಂತಿಗಳಷ್ಟೇ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ರಾಜೀನಾಮೆ ಕುರಿತ ವರದಿಗಳನ್ನು ಅವರು ಬಲವಾಗಿ ತಳ್ಳಿಹಾಕಿದ್ದು, ರಾಜ್ಯದ ಜನತೆಗೆ ಸೇವೆ ಸಲ್ಲಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಪಕ್ಷದ ನಾಯಕತ್ವಕ್ಕೆ ಯಾವುದೇ ಮುಜುಗರವಾಗದಂತೆ ತಡೆಯಲು, ಇಂದು ಸಂಜೆಯೊಳಗೆ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಲು ಸಚಿವ ನಾಗೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಊಹಾಪೋಹಗಳು ಮಾಧ್ಯಮಗಳಲ್ಲಿ ಹರಿದಾಡಿದ್ದವು.
ರಾಜೀನಾಮೆ ವದಂತಿ ಕೇವಲ ಸುಳ್ಳು
ಆದರೆ, ಇಂತಹ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯುತ್ತಾ, ಸಚಿವರ ಕಚೇರಿಯು ಅಧಿಕೃತವಾಗಿ ಸ್ಪಷ್ಟನೆ ನೀಡಿದೆ, “ಮುಖ್ಯಮಂತ್ರಿಯವರ ಕಚೇರಿಯಿಂದ ಯಾವುದೇ ಕರೆ ಬಂದಿಲ್ಲ, ಹಾಗೂ ರಾಜೀನಾಮೆಗೆ ಸಂಬಂಧಿಸಿದಂತೆ ಯಾವುದೇ ಚರ್ಚೆಗಳೂ ನಡೆದಿಲ್ಲ. ಸಾರ್ವಜನಿಕರಲ್ಲಿ ಗೊಂದಲವನ್ನು ಸೃಷ್ಟಿಸುವ ಇಂತಹ ಮಾಧ್ಯಮ ವರದಿಗಳು ಸಂಪೂರ್ಣವಾಗಿ ಸುಳ್ಳು.” ಎಂದು ಸ್ಪಷ್ಟಪಡಿಸಿದೆ



