ಹೊಸದಿಗಂತ ವರದಿ ತಿಪಟೂರು :
ಮಾಜಿ ಸಚಿವ ಬಿ.ಸಿ.ನಾಗೇಶ್ ಅವರ ಸಾರ್ವಜನಿಕ ಸೇವೆ ಮತ್ತು ಕೊಡುಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ತಿಪಟೂರು ನಗರದಲ್ಲಿ ನಾಳೆ (ಸೆ. 2) ಗೌರವಪೂರ್ವಕ ‘ನುಡಿ ನಮನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಗರದ ಗುರುಕುಲ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10.30 ಕ್ಕೆ ಈ ಕಾರ್ಯಕ್ರಮವು ಜರುಗಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಮುಖಂಡರುಗಳು, ತಾಲೂಕಿನ ವಿವಿಧ ಮಠಾಧೀಶರುಗಳು ಭಾಗವಹಿಸಲಿದ್ದಾರೆ.



