ಹೊಸದಿಗಂತ ವರದಿ ಕೊಪ್ಪಳ:
ನವಲಿ ಜಲಾಶಯ ನಿರ್ಮಾಣ ಹಾಗೂ ನೀರಾವರಿ ಸಮಸ್ಯೆ ಕುರಿತು 5ನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆಯು ಶನಿವಾರ ಬೆಳಿಗ್ಗೆ 9.00 ಗಂಟೆಗೆ ಕಾರಟಗಿಯ ನವಲಿ ಸರ್ಕಲ್ ನಿಂದ ನಡೆಯಲಿದೆ.
ಇದನ್ನೂ ಓದಿ:
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಬಿ. ಶ್ರೀರಾಮುಲು, ಶಾಸಕ ಗಾಲಿ ಜನಾರ್ಧನ ರೆಡ್ಡಿ, ವಿ. ಸುನೀಲ್ ಕುಮಾರ್ ಭಾಗವಹಿಸಲಿದ್ದಾರೆ.



