ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ-ಪಶ್ಚಿಮ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಅಚಾನಕ್ ಆಗಿ ಕಟ್ಟಡವೊಂದು ಕುಸಿದು ಬಿದ್ದಿದ್ದು ಹಲವಾರು ಮಂದಿ ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದುವರೆಗೆ ಮೂವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಿಸಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು ದೆಹಲಿಯ ಏಮ್ಸ್ ಟ್ರಾಮಾ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಶೇಷಗಳನ್ನು ತೆರವುಗೊಳಿಸಲು ಅಗತ್ಯ ಉಪಕರಣಗಳನ್ನು ಬಳಸಲಾಗುತ್ತಿದ್ದು, ರಕ್ಷಣಾ ತಂಡಗಳು ಕಟ್ಟಡದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆಸುತ್ತಿವೆ.
ಕಾರಣ ಏನು ಎನ್ನೋದು ತಿಳಿದುಬಂದಿಲ್ಲ
ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಟ್ಟಡದ ರಚನಾತ್ಮಕ ದೌರ್ಬಲ್ಯ, ನಿರ್ಮಾಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಅಥವಾ ಇತರ ಕಾರಣಗಳಿಂದ ಕುಸಿತ ಸಂಭವಿಸಿರಬಹುದೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುವ ಸಾಧ್ಯತೆಯಿದೆ.
ಘಟನೆಯ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಕಟ್ಟಡದ ಸುರಕ್ಷತಾ ಸ್ಥಿತಿಯ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.



