ಹೊಸದಿಗಂತ ವರದಿ ಹಾಸನ
ಹೋಟೆಲ್ ಮುಂಭಾಗ ಕುಳಿತು ಮದ್ಯಪಾನ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಹಾಗೂ ವ್ಯಕ್ತಿಯ ನಡುವೆ ಜಗಳ ನಡೆದು, ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಅರಕಲಗೂಡು ತಾಲೂಕಿನ ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾಂತರಾಜು ಗಾಯಗೊಂಡವರು. ಹೋಟೆಲ್ ಮಾಲೀಕ ಜಗದೀಶ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಕಾಂತರಾಜು ಹಾಗೂ ಅವರ ಸ್ನೇಹಿತ ಹೋಟೆಲ್ ಮುಂಭಾಗ ಕುಳಿತು ಮದ್ಯಪಾನ ಮಾಡುತ್ತಿದ್ದುದನ್ನು ಜಗದೀಶ್ ಪ್ರಶ್ನಿಸಿದಾಗ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಕಾಂತರಾಜು ಹಾಗೂ ಸ್ನೇಹಿತ ಜಗದೀಶ್ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಲು ಮುಂದಾದರು ಎನ್ನಲಾಗಿದ್ದು, ಬಳಿಕ ಜಗದೀಶ್ ಕಾಂತರಾಜು ಮೇಲೆ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ:
ಬಿಯರ್ ಬಾಟಲಿಯಿಂದ ಕಾಂತರಾಜು ತಲೆಗೆ ಹೊಡೆದಿರುವ ಆರೋಪ ಕೇಳಿಬಂದಿದೆ. ಗಾಯಗೊಂಡ ಕಾಂತರಾಜು ಅರಕಲಗೂಡು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



