ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ಪುಟಗಳ ಡೆತ್ನೋಟ್ ಬರೆದು ಬ್ಯಾಂಕ್ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನೋಯ್ಡಾದ ಆಕ್ಸಿಸ್ ಬ್ಯಾಂಕ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವತಿ ಶಿವಾನಿ ತ್ಯಾಗಿ ಬ್ಯಾಂಕ್ನಲ್ಲಿ ಸಹೋದ್ಯೋಗಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯುವತಿ ಸಹೋದರ ನಾಲ್ಕೈದು ಸಹೋದ್ಯೋಗಿಗಳ ವಿರುದ್ಧ ನಂದಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ಐದಾರು ತಿಂಗಳಿನಿಂದ ತನ್ನ ಸಹೋದರಿ ಶಿವಾನಿ ತ್ಯಾಗಿಗೆ ಕೆಲಸದ ಸ್ಥಳದಲ್ಲಿ ತನ್ನ ಸಹೋದ್ಯೋಗಿಗಳು ಕಿರುಕುಳ ನೀಡಿದ್ದಾರೆ ಎಂದು ಹರಿನಗರ ನಿವಾಸಿ ಗೌರವ್ ತ್ಯಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಆಕೆಯ ಕೆಲಸದಲ್ಲಿ ಸುಖಾಸುಮ್ಮನೆ ತಪ್ಪು ಕಂಡುಹಿಡಿಯುವುದು, ಬಾಡಿ ಶೇಮಿಂಗ್, ಕಿರುಕುಳ ನೀಡುತ್ತಿದ್ದರು, ಗೇಲಿ ಮಾಡುತ್ತಿದ್ದರು ಇದರಿಂದ ಬೇಸತ್ತು ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ವಿಷ ಕುಡಿದ ಶಿವಾನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಈ ಪ್ರಕರಣದಲ್ಲಿ ಮೂವರು ಸಹೋದ್ಯೋಗಿಗಳಾದ ಜ್ಯೋತಿ ಚೌಹಾನ್, ಅಕ್ರಂ ಮತ್ತು ನಜ್ಮುಸ್ ಶಾಕಿಬ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ನಗರ ಡಿಸಿಪಿ ಜ್ಞಾನೇಂದ್ರ ಸಿಂಗ್ ತಿಳಿಸಿದ್ದಾರೆ. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.