ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರುಟ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ ದುಸ್ಥಿತಿ ಮರೆ ಮಾಚಲು ತಾಂತ್ರಿಕ ಕಾರಣ ನೆಪ ಹೇಳುತ್ತಿದ್ದಾರೆ. ಸರ್ಕಾರ ತಕ್ಷಣ ರೈತರ ಖಾತೆಗಳಿಗೆ 2000. ರೂ. ಹಣ ವರ್ಗಾವಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಹುತೆಕ ತಾಲುಕುಗಳು ಬರ ಅಂತ ಘೊಷಣೆ ಆಗಿದೆ. ಮುಂಗಾರು, ಹಿಂಗಾರು ವಿಫಲವಾಗಿದೆ. ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಯಾವುದೇ ಕಾಮಗಾರಿ ಆರಂಭಿಸಿಲ್ಲ. ಆರು ತಿಂಗಳು ಕಳೆದರೂ ಯಾವುದೇ ಕೆಲಸ ಮಾಡದ ಸಿದ್ದರಾಮಯ್ಯ ಸರ್ಕಾರ ಈಗ ಆಧಾರ ಜೋಡಣೆಯ ನೆಪ ಹೇಳಿ ರೈತರಿಗೆ ವಂಚನೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ರೈತರ ಬಗ್ಗೆ ಕಾಳಜಿ ಇದ್ದರೆ ತಕ್ಷಣ 2000 ರೂ. ರೈತರ ಖಾತೆಗೆ ಜಮಾ ಮಾಡಬೇಕು. ರೈತರು ತಿರುಗಿ ಬಿದ್ದರೆ ಯಾವ ಸರ್ಕಾರವೂ ನಡೆಯುವುದು ಕಷ್ಟವಾಗಲಿದೆ ಎಂದು ಎಚ್ಚರಿಕೆ ನೀಡಿದರು.