ರಸ್ತೆ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಹೊಸದಿಗಂತ ವರದಿ ಕಲಬುರಗಿ: 

ರಸ್ತೆಯ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಜೇವಗಿ೯ ತಾಲೂಕಿನ ಕಟ್ಟಿಸಂಗಾವಿ ಗ್ರಾಮದ ಭೀಮಾ ನದಿ ಬ್ರಿಡ್ಜ್ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.  ಆಕಾಶ್ ಬಡಿಗೇರ (21), ಶಿವು ಮ್ಯಾಗೇರಿ (22), ಮತ್ತು ಲಕ್ಷ್ಮಣ ಮಲವಾಡಿ (18) ಮೃತ ದುರ್ದೈವಿಗಳು.

ಮೃತರು ಎಸ್.ಎನ್.ಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ. ರಸ್ತೆ ಬದಿಗೆ ನಿಂತಿದ್ದ ಲಾರಿ ವೇಗವಾಗಿ ಬಂದು ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ನಾಗಾವಿ ಯಲ್ಲಮ್ಮ ದೇಗುಲದ ಪೂಜೆ ಮುಗಿಸಿಕೊಂಡು ಬಾಡೂಟ ಮಾಡಿ ವಾಪಸ್ಸು ಬರುವಾಗ ಈ ಘಟನೆ ಸಂಭವಿಸಿದ್ದು, ಕಲಬುರಗಿ ಸಂಚಾರಿ 1 ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!