ಡೀಸೆಲ್ ಟ್ಯಾಂಕರ್​ಗೆ ಬೈಕ್​ ಡಿಕ್ಕಿ: ಸವಾರ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಬಳಿ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಎದುರಿನಿಂದ ಬರುತ್ತಿದ್ದ ಬೈಕ್​ ಸವಾರ ಸಜೀವ ದಹನವಾದ ಘಟನೆ ನಡೆದಿದೆ.

ಬೆಂಕಿಗೆ ಸಿಲುಕಿದ ಬೈಕ್​ ಸವಾರ ಹಗರಿ ಬೊಮ್ಮನಹಳ್ಳಿ ತಾಲೂಕಿನ ಹಂಪಪಟ್ನಾ ಗ್ರಾಮದ ನಾಗರಾಜ್​(35) ಎಂಬುವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಜೊತೆಗಿದ್ದ ವ್ಯಕ್ತಿಗೆ ಗಂಭೀರ ಸುಟ್ಟಗಾಯವಾಗಿದ್ದು, ಟ್ಯಾಂಕರ್ ಚಾಲಕ ಪ್ರಾಣಾಯಾದಿಂದ ಪಾರಾಗಿದ್ದಾನೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿಗೆ 5 ಕಿಲೋ ಮೀಟರ್​ ದೂರ ಇರುವಾಗ ಈ ಅವಘಡ ಸಂಭವಿಸಿದೆ. ದಾವಣಗೆರೆ ಡೀಸೆಲ್​ ಟ್ಯಾಂಕರ್​ನಲ್ಲಿ 8 ಸಾವಿರ ಲೀಟರ್ ಡಿಸೇಲ್ 4 ಸಾವಿರ ಲೀಟರ್ ಪೆಟ್ರೋಲ್ ತುಂಬಿಕೊಂಡು ಬರುತ್ತಿತ್ತು. ಎದುರು ಬಂದ ಬೈಕ್ ತಪ್ಪಿಸಲು ಹೋಗಿ ಪಕ್ಕಕ್ಕೆ ಬಿದ್ದಿ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಬೈಕ್ ಸವಾರ ನಾಗರಾಜ್ ಟ್ಯಾಂಕರ್ ಕೆಳಗೆ ಬಿದ್ದು ಸುಟ್ಟು ಕರಕಲಾಗಿದ್ದಾನೆ.

ಸುಟ್ಟು ಕರಕಲಾದ ನಾಗರಾಜ್ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಮೂರುಗೇರೆ ಗ್ರಾಮದವನಾಗಿದ್ದಾರೆ. ಇವರು ಹರಪನಹಳ್ಳಿಯಲ್ಲಿ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗ್ತಿದೆ. ಹೆಂಡತಿಯ ತವರು ಮನೆಗೆ ಹೋಗಿ ಅಲ್ಲಿಂದ ಅವರ ಜಮೀನಿಗೆ ತೆರಳುವ ದಾರಿಯಲ್ಲಿ ಈ ಅವಘಡ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!