SHOCKING NEWS | ನಡುರಸ್ತೆಯಲ್ಲೇ ಬಿಜೆಪಿ ಮುಖಂಡನ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ನಡುರಸ್ತೆಯಲ್ಲೇ ಬಿಜೆಪಿ ಮುಖಂಡನ ಹತ್ಯೆ ಮಾಡಲಾಗಿದೆ.
ಮುಖಂಡ ಪಿಪಿಜಿ ಶಂಕರ್ ಮದುವೆಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ, ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರ್ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ.

ಪೆರಂಬೂರು ಪಕ್ಕದ ವಲರಪುರಂನ ಪಂಚಾಯತ್ ಅಧ್ಯಕ್ಷರಾಗಿದ್ದ ಶಂಕರ್ ಅವರನ್ನು ನಡುರಸ್ತೆಯಲ್ಲೇ ಆಗಂತುಕರು ಕೊಂದಿದ್ದಾರೆ.

ಕಾರಿನ ಮೇಲೆ ಕಂಟ್ರಿ ಬಾಂಬ್ ಎಸೆದಿದ್ದಾರೆ. ಗಾಬರಿಯಾದ ಶಂಕರ್ ಕಾರ್‌ನ್ನು ನಿಲ್ಲಿಸಿ ಓಡಿಹೋಗಿದ್ದಾರೆ. ಗ್ಯಾಂಗ್ ಅವರನ್ನು ಹಿಂಬಾಲಿಸಿ ಕೊಲೆ ಮಾಡಿ ಪರಾರಿಯಾಗಿದೆ. ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಶಂಕರ್‌ರನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಕೊಲೆಗಾರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!