ಹೊಸದಿಗಂತ ವರದಿ ಮಡಿಕೇರಿ:
ಹಾರಂಗಿ ನಾಲೆಯಲ್ಲಿ ಏಡಿ ಹಿಡಿಯಲು ಹೋದ ವಿದ್ಯಾರ್ಥಿಯೊಬ್ಬ ಕಣ್ಮರೆಯಾಗಿರುವ ಘಟನೆ ಕುಶಾಲನಗರ ಸಮೀಪದ ಬ್ಯಾಡಗೊಟ್ಟ ಬಳಿ ನಡೆದಿದೆ.
ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಶಾಲೆಯ ವಿದ್ಯಾರ್ಥಿ ಅನಿತ್ ಎಂಬಾತನೇ ಕಣ್ಮರೆಯಾದ ಬಾಲಕ.
ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಹಾದು ಹೋಗಿರುವ ಹಾರಂಗಿ ನಾಲೆಯಲ್ಲಿ ಬುಧವಾರ ಬೆಳಗ್ಗೆ 8.30ರ ಸುಮಾರಿಗೆ ಅನಿತ್ ಏಡಿ ಹಿಡಿಯಲೆಂದು ಇಳಿದಿದ್ದಾನೆ. ಆ ಬಳಿಕ ಆತ ಕಣ್ಮರೆಯಾಗಿರುವುದಾಗಿ ಹೇಳಲಾಗಿದೆ.
ಇದೀಗ ನಾಲೆಯಲ್ಲಿ ನೀರು ಸ್ಥಗಿತಗೊಳಿಸಿ ಬಾಲಕನಿಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.