ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಹೆಚ್ಚುತ್ತಿದ್ದು, ಹೀಗಾಗಿ ಫೈನಾನ್ಸ್ ಕಾಟಕ್ಕೆ ಬ್ರೇಕ್ ಹಾಕಲು ಸುಗ್ರೀವಾಜ್ಞೆ ಜಾರಿಗೆ ಸರ್ಕಾರ ಮುಂದಾಗಿದ್ದು, ಕ್ಯಾಬಿನೆಟ್ನಲ್ಲಿ ಅನುಮೋದನೆ, ಕಾನೂನು ವಿಚಾರಗಳ ಬಗ್ಗೆ ಸುಧೀರ್ಘವಾಗಿ ಚರ್ಚೆ ನಡೆಸಿದ ಬಳಿಕ ಇದೀಗ ಕರಡು ಪ್ರತಿಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ.
3 ವರ್ಷದ ಬದಲು 10 ವರ್ಷ ಜೈಲು ಶಿಕ್ಷೆ ಅಂತಾ ಕರಡು ಪ್ರತಿಯಲ್ಲಿ ಬದಲಾವಣೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಸುಗ್ರೀವಾಜ್ಞೆ ಹೊರಬೀಳಲಿದೆ.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ ಜಾರಿಗೆ ಗ್ರೀನ್ಸಿಗ್ನಲ್ ಸಿಕ್ಕಿತ್ತು. ಅದರಂತೆಯೇ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಿಎಂಗೆ ಡ್ರಾಫ್ಟ್ ಪ್ರತಿ ರವಾನೆ ಮಾಡಿದ್ದರು. ಇದೀಗ ಪರಿಶೀಲಿಸಿದ ಬಳಿಕ ಡ್ರಾಫ್ಟ್ ಪ್ರತಿ ರಾಜ್ಯಪಾಲರಿಗೆ ರವಾನೆ ಮಾಡಲಾಗಿದೆ.
ಶಿಕ್ಷೆ ಪ್ರಮಾಣದಲ್ಲಿ 3 ವರ್ಷದ ಬದಲು 10 ವರ್ಷ ಜೈಲು ಶಿಕ್ಷೆಗೆ ಒಳಪಡಿಸೋಕೆ ಬದಲಾವಣೆ ಮಾಡಿ ಕರಡು ಪ್ರತಿ ರವಾನೆ ಮಾಡಲಾಗಿದೆ. ಇನ್ನೇನಿದ್ದರೂ ರಾಜ್ಯಪಾಲರ ಅಂಕಿತ ಒಂದೇ ಬಾಕಿ ಇದೆ.