ಹೊಸದಿಗಂತ ವರದಿ,ಮಡಿಕೇರಿ:
ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು, ಎಮ್ಮೆಯೊಂದನ್ನು ಬಲಿ ಪಡೆದಿದೆ.
ಪೊನ್ನಂಪೇಟೆ ತಾಲೂಕಿನ ಬಲ್ಯಮಂಡೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು ಗ್ರಾಮದ ಚೇಂದಿರ ಸುರೇಶ್ ಎಂಬವರ ತೋಟಕ್ಕೆ ಮಂಗಳವಾರ ಮುಂಜಾನೆ ನುಗ್ಗಿದ ಹುಲಿ ಎಮ್ಮೆಯನ್ನು ಬಲಿ ತೆಗೆದುಕೊಂಡಿದೆ.
ಸುದ್ದಿ ತಿಳಿದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಭಾಗದಲ್ಲಿ ನಿರಂತರವಾಗಿ ಹುಲಿ ಹಾವಳಿ ಹೆಚ್ಚಾಗುತ್ತಿದ್ದು ಕೂಡಲೇ ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.