ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೆ.ಎಸ್.ಆರ್.ಟಿ.ಸಿ ಬಸ್ಸು ಹರಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಮಂಗಳವಾರ ಕಾಸರಗೋಡು ನಗರದ ಎಂ. ಜಿ ರಸ್ತೆಯ ಹಳೆ ಬಸ್ಸು ನಿಲ್ದಾಣ ಪರಿಸರದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನ್ನು ಮೊಗ್ರಾಲ್ ಪುತ್ತೂರು ಕಡವತ್ ಮೊಗರಿನ ಮುಹಮ್ಮದ್ ಫಾಸಿಲ್ ತಬ್ಸಿರ್ (22) ಎಂದು ಗುರುತಿಸಲಾಗಿದೆ.
ಫಾಸಿಲ್ ತಬ್ಸಿರ್ ಮೊಗ್ರಾಲ್ ಪುತ್ತೂರಿನ ಬೇಕರಿಯಲ್ಲಿ ನೌಕರನಾಗಿದ್ದನು.
ಮುಂದಿನಿಂದ ಸಾಗುತ್ತಿದ್ದ ಇನ್ನೊಂದು ವಾಹನ ಒಮ್ಮೆಲೇ ಬ್ರೇಕ್ ಹಾಕಿದಾಗ ಸ್ಕೂಟರ್ ನಿಂದ ರಸ್ತೆಗೆಸೆಯಲ್ಪಟ್ಟ ಫಾಸಿಲ್ ತಬ್ಸಿರ್ ನ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಹಿಂಬದಿ ಚಕ್ರ ಹರಿದು ಈ ದುರ್ಘಟನೆ ನಡೆದಿದೆ.
ನಗರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದು , ಅಪಘಾತಕ್ಕೆ ಕಾರಣವಾದ ಕೆ ಎಸ್ ಆರ್ ಟಿ ಸಿ ಬಸ್ಸನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.