Sunday, June 4, 2023

Latest Posts

SHOCKING | ಮೃತದೇಹ ಬೇಗ ಸಿಗಲಿ ಎಂದು ಬಲೂನ್ ಕಟ್ಟಿಕೊಂಡು ನದಿಗೆ ಹಾರಿದ ಉದ್ಯಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರಿನಲ್ಲಿ ಕುಮಾರಧಾರ ನದಿಗೆ ಹಾರಿ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ಘಟನೆ ನಡೆದಿದೆ. ಉದ್ಯಮಿ ಚಂದ್ರಶೇಖರ ಅವರು ತಮ್ಮ ದೇಹಕ್ಕೆ ಬಲೂನ್ ಕಟ್ಟಿಕೊಂಡು ನದಿಗೆ ಹಾರಿದ್ದಾರೆ.

ಮೃತದೇಹ ಹುಡುಕಲು ಯಾರಿಗೂ ಸಮಸ್ಯೆಯಾಗಬಾರದು ಎನ್ನುವ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರೂ ಆಗಿದ್ದ ಚಂದ್ರಶೇಖರ ಅವರು ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿದುಬಂದಿಲ್ಲ.

ತೇಲುತ್ತಿರುವ ಬಲೂನ್ ನೋಡಿ ಸ್ಥಳೀಯರು ಅನುಮಾನಗೊಂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಮೃತದೇಹ ಹೊರೆತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!