ಪಕ್ಷಕ್ಕೆ ಯಾರೂ ನಿಷ್ಠರಾಗಿರುತ್ತಾರೆ ಅಂತಹ ಅಭ್ಯರ್ಥಿಗೆ ಟಿಕೆಟ್‌ ಖಂಡಿತ: ಪ್ರಹ್ಲಾದ್ ಜೋಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರತಿ ಚುನಾವಣೆಯಲ್ಲೂ ಟಿಕೆಟ್ ಹಂಚಿಕೆ ಕೇವಲ ಒಂದು ಪ್ರಕ್ರಿಯೆ ಅಷ್ಟೆ. ಇದಕ್ಕೆ ಯಾವುದೇ ಕಸರತ್ತು ನಡೆಸುವ ಅಗತ್ಯವಿಲ್ಲ. ಪಕ್ಷ ನಿಷ್ಠೆಯಿಂದ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಆದರೆ, ಈವರೆಗೆ ಪಕ್ಷ 195 ಸ್ಥಾನಗಳನ್ನು ಘೋಷಿಸಿದೆ. ಎಲ್ಲರೊಂದಿಗೆ ಮಾತನಾಡಿ ಗೆಲ್ಲುವವರನ್ನು ನೋಡಿ ರಾಜ್ಯ ನಾಯಕರು ಟಿಕೆಟ್ ಬಗ್ಗೆ ತೀರ್ಮಾನಿಸಲಿದ್ದಾರೆ. ಪಕ್ಷದ ಸದಸ್ಯರಿಗೆ ಟಿಕೆಟ್ ನಿರಾಕರಿಸುವ ಪ್ರಸ್ತಾಪವಿಲ್ಲ ಎಂದು ತಿಳಿಸಿದ್ದಾರೆ.

ಈ ಬಾರಿ ಬಿಜೆಪಿ, ದೇಶದಲ್ಲಿ ಐತಿಹಾಸಿಕ ಗೆಲುವು ಸಾಧಿಸಲಿದೆ. ನಾವು ನಮ್ಮ ಅಧಿಕಾರವನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇವೆ. ಭವಿಷ್ಯದಲ್ಲಿ ಈ ದೇಶದಲ್ಲಿ ಅಭೂತಪೂರ್ವ ಬದಲಾವಣೆ ತರುತ್ತೇವೆ. ನಮ್ಮ ದೇಶ ಪ್ರಸ್ತುತ ವಿಶ್ವದಲ್ಲಿ ಐದನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಭಾರತ ಮೂರನೇ ಸ್ಥಾನ ತಲುಪಿ ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!