ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಪ್ಪಳದಲ್ಲಿ ಲಾರಿ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಅಪಘಾತ ಸಂಭವಿಸಿದ್ದು, ಕಾರ್ ಟೈರ್ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ.
ಕಾರ್ ಉಲ್ಟಾ ಆಗಿದ್ದು, ಕಾರ್ನಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ್ ಶಿವಶರಣ, ಜಯಶ್ರೀ, ರಾಖಿ ಹಾಗೂ ರಶ್ಮಿಕಾ ಮೃತರು.
ಮೃತದೇಹಗಳು ನಜ್ಜುಗುಜ್ಜಾದ ಕಾರ್ನಲ್ಲಿ ಸಿಲುಕಿದ್ದು, ಅದನ್ನು ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.