ಹೊಸದಿಗಂತ ಡಿಜಿಟಲ್ ಡೆಸ್ಕ್
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಿಂತಿದ್ದ ಕಂಟೈನರ್ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮಕ್ಕಳು ಮತ್ತು ಇಬ್ಬರು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಪುಣೆಯಿಂದ ನೆರೆಯ ಕೊಲ್ಲಾಪುರದ ಜಯಸಿಂಗ್ಪುರಕ್ಕೆ ತೆರಳುತ್ತಿದ್ದಾಗ ಸಾಂಗ್ಲಿಯ ಕಾಸೆಗಾಂವ್ ಪ್ರದೇಶದ ಯೆವಲೆವಾಡಿ ಫಾಟಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
” ಅಪಘಾತದ ಬಳಿಕ ಕಾರು ಸಂಪೂರ್ಣವಾಗಿ ನುಗ್ಗುಗುಜ್ಜಾಗಿದ್ದು, ಅತಿವೇಗಕ್ಕೆ ಈ ಅಪಘಾತಕ್ಕೆ ಕಾರಣವಾಗಿರುವ ಬಗ್ಗೆ ತಿಳಿದುಬಂದಿದೆ. ಅದರಲ್ಲಿದ್ದ ಎಲ್ಲಾ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಕಾಸೆಗಾಂವ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಅರಿಂಜಯ್ ಶಿರೋಟೆ (35), ಮತ್ತು ಅವರ ಸಂಬಂಧಿಕರಾದ ಸ್ಮಿತಾ ಶಿರೋಟೆ (38) ಪೂರ್ವ ಶಿರೋಟೆ (14), ಸುನೇಶಾ ಶಿರೋಟೆ (10) ಮತ್ತು ವೀರು ಶಿರೋಟೆ (4) ಎಂದು ಗುರುತಿಸಲಾಗಿದೆ.
ಅರಿಂಜಯ್ ಶಿರೋಟೆ ತನ್ನ ಸಂಬಂಧಿಕರನ್ನು ಜೈಸಿಂಗ್ಪುರಕ್ಕೆ ಬಿಡಲು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ