ಹೊಸದಿಗಂತ ವರದಿ, ಮೈಸೂರು:
ನೀರಿನ ಗುಂಡಿಗೆ ಬಿದ್ದು ಮಗುವೊಂದು ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ವಡ್ಡನಕಟ್ಟೆ ಹಾಡಿಯಲ್ಲಿ ನಡೆದಿದೆ.
ಹಾಡಿಯ ನಿವಾಸಿ ಪವಿತ್ರ ಎಂಬುವರ ಪುತ್ರ ಉದೇಶ್ (3) ಮೃತಪಟ್ಟ ಮಗು. ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ನಿರ್ಮಾಣ ಮಾಡಲು ಕಾಮಗಾರಿಯನ್ನು ನಡೆಸಲಾಗುತ್ತಿದೆ.
ಕಾಮಗಾರಿಗೆ ಅಗತ್ಯವಿರುವ ನೀರನ್ನು ಸಂಗ್ರಹಿಸಲೆoದು ಸುಮಾರು 7 ಅಡಿಗಳಷ್ಟು ಗುಂಡಿಯನ್ನು ತೆಗೆದು, ಅದರಲ್ಲಿ ನೀರನ್ನು ತುಂಬಿಸಲಾಗಿತ್ತು. ಇದರ ಪಕ್ಕದಲ್ಲಿ ಆಟವಾಡುತ್ತಿದ್ದ ಪವಿತ್ರರ ಪುತ್ರ ಉದೇಶ್ ಆಕಸ್ಮಿಕವಾಗಿ ನೀರಿನ ಗುಂಡಿಗೆ ಬಿದ್ದು, ಮುಳುಗಿ ಸಾವಿಗೀಡಾಗಿದ್ದಾನೆ. ಮಗುವಿಗಾಗಿ ಹುಡುಕಾಟ ನಡೆಸಿದ ತಾಯಿಗೆ ನೀರಿನ ಗುಂಡಿಯಲ್ಲಿ ಬಿದ್ದಿರುವುದು ಕಂಡು ಬಂದಿದೆ. ಘಟನೆ ಸಂಬoಧ ಪಿರಿಯಾಪಟ್ಟಣ ಠಾಣೆಯ ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.