ವಿಮಾನದಲ್ಲಿ ಮಗುವಿಗೆ ದಿಢೀರ್ ಕಾಣಿಸಿಕೊಂಡ ಉಸಿರಾಟ ಸಮಸ್ಯೆ: ನೆರವಿಗೆ ಧಾವಿಸಿದ ವೈದ್ಯ, ಐಎಎಸ್ ಅಧಿಕಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೃದಯ (Heart) ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗು ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ಅದರಲ್ಲಿ ಪ್ರಯಾಣಿಸುತ್ತಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ ನಡುವಿನ ವಿಮಾನದಲ್ಲಿ (Ranchi-Delhi Flight) ನಡೆದಿದೆ.

ರಾಂಚಿಯಿಂದ ಮಗುವನ್ನು ದೆಹಲಿಯ (New Delhi) ಏಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಈ ಘಟನೆ ನಡೆದಿದ್ದು,ವಿಮಾನ ಹಾರಾಟದಲ್ಲಿದ್ದಾಗ ಮಗು ತೀವ್ರ ಉಸಿರಾಟದ ತೊಂದರೆ ಅನುಭವಿಸಿದೆ.  ವಿಮಾನದ ಸಿಬ್ಬಂದಿ ವಿಚಾರ ತಿಳಿದು ಸಂತೈಸಲು ಯತ್ನಿಸಿದ್ದಾರೆ. ಬಳಿಕ 20 ನಿಮಿಷಗಳ ನಂತರ ಯಾರಾದರೂ ವೈದ್ಯರಿದ್ದರೆ ಸಹಕರಿಸುವಂತೆ ಸಿಬ್ಬಂದಿ ಕೇಳಿಕೊಂಡಿದ್ದಾರೆ.

ಈ ವೇಳೆ ಐಎಎಸ್ ಅಧಿಕಾರಿಯಾದ ಜಾರ್ಖಂಡ್ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ ಡಾ.ನಿತಿನ್ ಕುಲಕರ್ಣಿ ಮತ್ತು ರಾಂಚಿಯ ಸದರ್ ಆಸ್ಪತ್ರೆಯ ಡಾ.ಮೊಝಮ್ಮಿಲ್ ಫೆರೋಜ್ ಮಗುವನ್ನು ಉಳಿಸಲು ಮುಂದೆ ಬಂದಿದ್ದಾರೆ. ವಯಸ್ಕರಿಗೆ ಬಳಸುವ ಮಾಸ್ಕ್ ಬಳಸಿ ಆಮ್ಲಜನಕವನ್ನು ಒದಗಿಸಿದ್ದಾರೆ. ಬಳಿಕ ಮಗುವಿನ ಪೋಷಕರ ಬಳಿ ಇದ್ದ ಚುಚ್ಚುಮದ್ದನ್ನು ನೀಡಿ ಚಿಕಿತ್ಸೆ ನೀಡಿದ್ದಾರೆ.

ಮೊದಲ 15-20 ನಿಮಿಷಗಳು ಬಹಳ ಒತ್ತಡದಿಂದ ಕೂಡಿದ್ದವು.  ಮಗುವಿನ ಆರೋಗ್ಯ ಪ್ರಗತಿಯನ್ನು ಅಳೆಯುವುದು ಕಷ್ಟಕರವಾಗಿತ್ತು. ಅಂತಿಮವಾಗಿ ಕಣ್ಣುಗಳು ಸಹಜವಾದವು. ಮಗು ಕೂಡ ಶಬ್ದ ಮಾಡಿತು ಎಂದು ವೈದ್ಯರು ತಿಳಿಸಿದ್ದಾರೆ.ಇದಾದ ಒಂದು ಗಂಟೆಯ ನಂತರ ವಿಮಾನ ಲ್ಯಾಂಡ್ ಆದ ಮೇಲೆ ವೈದ್ಯಕೀಯ ತಂಡವು ಮಗುವನ್ನು ತಮ್ಮ ಆರೈಕೆಗೆ ತೆಗೆದುಕೊಂಡಿತು.

ಡಾ.ಮೊಝಮ್ಮಿಲ್ ಫೆರೋಜ್ ಹಾಗೂ ಡಾ.ನಿತಿನ್ ಕುಲಕರ್ಣಿ ಅವರ ಕಾರ್ಯಕ್ಕೆ ಜನ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!