ಹೊಸದಿಗಂತ ವರದಿ, ಉಡುಪಿ:
ಮಂಗಳವಾರ ರಣಭೀಕರ ಮಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಪಡುಬಿದ್ರೆ ಪೇಟೆಯಲ್ಲಿ ದ್ವಿಚಕ್ರ ವಾಹನ ಸವಾರನ ಮೇಲೆ ಬೃಹತ್ ಲಾರಿಯೊಂದು ಮಗುಚಿ ಬಿದ್ದ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬೈಕ್ ಸವಾರ ಸಂಶುದ್ದೀನ್ ಮೃತ ದುರ್ಧೈವಿ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮಗುಚಿ ಬಿದ್ದಿದೆ.
ಪಡುಬಿದ್ರೆ ಪೇಟೆಯಲ್ಲಿ ನಡೆದ ಘಟನೆಯಿಂದಾಗಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಯಿತು. ಅಪಘಾತಕ್ಕೀಡಾದ ವಾಹನವನ್ನು ಕ್ರೈನ್ ಮೂಲಕ ತೆರವುಗೊಳಿಸಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ