Wednesday, March 29, 2023

Latest Posts

ಮಂಗಳೂರಿನ ಲಾಡ್ಜ್‌ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಂಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಲಾಡ್ಜ್‌ವೊಂದರಲ್ಲಿ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬುಧವಾರ ನಡೆದಿದೆ.

ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಭ ನಿವಾಸಿಗಳಾದ ರವೀಂದ್ರ (55), ಸುಧಾ (50) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ದಂಪತಿ.

ಫೆಬ್ರವರಿ 6ರಂದು ಲಾಡ್ಜ್‌ ಬಾಡಿಗೆ ಪಡೆದಿದ್ದರು. ಸಿಬ್ಬಂದಿ ಅವರು ನೋಡಿದ್ದು ಬಳಿಕ ಎರಡು ದಿನಗಳಿಂದ ಅವರು ಹೊರ ಬಾರದೇ ಇದ್ದ ಕಾರಣ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಾಗಿಲು ತೆರೆದಾಗ ದಂಪತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!