ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ಹೊಸದಿಗಂತ ವರದಿ ವಿಜಯಪುರ:
ದಂಪತಿ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ
ಮುದ್ದೇಬಿಹಾಳ ಪಟ್ಟಣದ ಎಪಿಎಂಸಿ ಪಕ್ಕದ ಮನೆಯೊಂದರಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ.
ಇಲ್ಲಿನ ತಿಪ್ಪಣ್ಣ ಹೊಸಮನಿ (34) ಮತ್ತು ಆತನ ಪತ್ನಿ ಸುಜಾತಾ ಹೊಸಮನಿ (30) ನೇಣಿಗೆ ಶರಣಾದ ದಂಪತಿ.
ತಿಪ್ಪಣ್ಣ ಹೊಸಮನಿ, ಸುಜಾತಾ ಹೊಸಮನಿ ಈ ಇಬ್ಬರು, ಮನೆಯ ಅಕ್ಕಪಕ್ಕದ ಕೋಣೆಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!