ಹೊಸದಿಗಂತ ಡಿಜಿಟಲ್ ಡೆಸ್ಕ್:
ನದಿಯಲ್ಲಿ ಸ್ನಾನ ಮಾಡುತ್ತಿದ್ದ 10 ವರ್ಷದ ಬಾಲಕನ ಮೇಲೆ ಮೊಸಳೆಯೊಂದು ದಾಳಿ ಮಾಡಿ ಆತನನ್ನು ತನ್ನ ಆಹಾರವಾಗಿಸಿಕೊಂಡಿದೆ. ಮಧ್ಯಪ್ರದೇಶದ ಶಿಯೋಪುರದಲ್ಲಿ ಸೋಮವಾರ ಬೆಳಿಗ್ಗೆ ಚಂಬಲ್ ನದಿಯಲ್ಲಿ ಸ್ನಾ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಮೊಸಳೆ ಆತನನ್ನು ನದಿಗೆ ಎಳೆದೊಯ್ದಿದೆ.
ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ದೊಣ್ಣೆ,ಹಗ್ಗ, ಬಲೆಗಳಿಂದ ಮೊಸಳೆಯನ್ನು ಹಿಡಿದು ನದಿಯಿಂದ ಹೊರಗೆಳೆದು ತಂದಿದ್ದಾರೆ. ಹಾಗೂ ಕೂಡಲೇ ಆತನ ಕುಟುಂಬಕ್ಕೆ ವಿಷಯ ತಿಳಿಸಿದ್ದಾರೆ. ಅಷ್ಟರಲ್ಲಿ ಘಟನೆಯ ಬಗ್ಗೆ ಮಾಹಿತಿ ಪಡೆದ ಮೊಸಳೆ ವಿಭಾಗದ ತಂಡ ಮತ್ತು ಪೊಲೀಸ್ ತಂಡ ಸ್ಥಳಕ್ಕೆ ತಲುಪಿತು. ಎರಡೂ ತಂಡಗಳು ಮೊಸಳೆಯನ್ನು ಗ್ರಾಮಸ್ಥರ ಹಿಡಿತದಿಂದ ರಕ್ಷಿಸಲು ಯತ್ನಿಸಿದವು. ಆದರೆ, ಸಂಜೆಯವರೆಗೂ ಬಾಲಕನ ಕುಟುಂಬಸ್ಥರು ಇದಕ್ಕೆ ಒಪ್ಪಿರಲಿಲ್ಲ. 10 ವರ್ಷದ ಮಗುವಿನ ಕುಟುಂಬಸ್ಥರು ಮೊಸಳೆಯ ಹೊಟ್ಟೆಯಲ್ಲಿ ಮಗು ಜೀವಂತವಾಗಿರಬಹುದೆಂಬ ನಿರೀಕ್ಷೆಯಲ್ಲಿದ್ದರು. ಮಗುವನ್ನು ಉಗುಳಿದಾಗ ಮಾತ್ರ ಮೊಸಳೆಯನ್ನು ಬಿಡುತ್ತೇವೆ ಎಂದು ಒತ್ತಾಯಿಸಿದರು.
ರಘುನಾಥಪುರ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ವೀರ್ ಸಿಂಗ್ ತೋಮರ್ ಈ ಕುರಿತು ಪ್ರತಿಕ್ರಿಯಿಸಿದ್ದು “ಬಾಲಕ ಸ್ನಾನ ಮಾಡುವಾಗ ನದಿಯ ಆಳಕ್ಕೆ ಹೋಗಿದ್ದಾನೆ. ಮಗುವನ್ನು ಮೊಸಳೆ ನುಂಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ನಂತರ ಬಲೆ ಮತ್ತು ಕೋಲುಗಳನ್ನು ಬಳಸಿ ಮೊಸಳೆಯನ್ನು ಹಿಡಿದಿದ್ದಾರೆ. ಅಲಿಗೇಟರ್ ಇಲಾಖೆ ಈ ವಿಷಯದಲ್ಲಿ ಕ್ರಮವನ್ನು ಪ್ರಾರಂಭಿಸಿದೆ” ಎಂದಿದ್ದಾರೆ. ಬಳಿಕ ಪೊಲೀಸ್ ಅಧಿಕಾರಿಗಳು ಹಾಗೂ ಮೊಸಳೆ ಇಲಾಖೆಯವರು ಗ್ರಾಮಸ್ಥರ ಮನವೊಲಿಸಿ ಮೊಸಳೆಯನ್ನು ಬಿಡಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.